ಡಿಕೆ ಶಿವಕುಮಾರ್, ವಿಜಯೇಂದ್ರ ಹೊಂದಾಣಿಕೆ ರಾಜಕೀಯ: ಸ್ಫೋಟಕ ಹೇಳಿಕೆ
ಶಿವವಮೊಗ್ಗ, ಆಗಸ್ಟ್ 09: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ನಡೆಸುತ್ತಿವೆ. ಇಂತಹ ಸಮಯದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯದ ಸ್ಫೋಟಕ ಆರೋಪ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದಿಂದಲೇ ಈ ಹೊಂದಾಣಿಕೆ ಆರಂಭವಾಗಿದೆ ಎಂಬುದು ಹೇಳಿಕೆಯಾಗಿದೆ.
ಶಿವಮೊಗ್ಗದಲ್ಲಿ ಶುಕ್ರವಾರ ಮಾಜಿ ಸಚಿವ, ಬಿಜೆಪಿಯ ಉಚ್ಛಾಟಿತ ನಾಯಕ ಕೆ. ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ನಾನು ಲೋಕಸಭೆ ಚುನಾವಣೆ 2024ಕ್ಕೆ ಸ್ಪರ್ಧೆ ಮಾಡಿದಾಗ ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ್ದೆ. ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದೆ. ಇದು ಈಗ ಸಾಕ್ಷಿ ಸಮೇತವಾಗಿ ಸಾಬೀತಾಗಿದೆ" ಎಂದು ಆರೋಪಿಸಿದರು.

"ನರೇಂದ್ರ ಮೋದಿ ಹೇಳಿದ ಹಾಗೆ ಕುಟುಂಬ ರಾಜಕಾರಣದಿಂದ ಹೊರಗಿರಬೇಕು. ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಅವರಿಗೆ ಟೀಕೆ ಮಾಡಿದಾಗ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣ ಒಪ್ಪಿಕೊಂಡಿದ್ದಾರೆ. ನಾವು ನಿಮಗೆ ಸಹಕಾರ ಕೊಟ್ಟಿಲ್ಲ ಎಂದಾಗಿದ್ದರೆ ನೀವು ಶಾಸಕರೇ ಆಗುತ್ತಿರಲಿಲ್ಲ ಎಂದಿದ್ದಾರೆ" ಎಂದು ಈಶ್ವರಪ್ಪ ಹೇಳಿದರು.
"ಶಿಕಾರಿಪುರದಲ್ಲಿ ನಾವು ಹೊಂದಾಣಿಕೆ ಮಾಡಿಕೊಂಡಿಲ್ಲವೆಂದಾಗಿದ್ದರೆ ನೀವು ಶಾಸಕ ಆಗುತ್ತಿರಲಿಲ್ಲ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಹೊಂದಾಣಿಕೆ ರಾಜಕೀಯದ ಬಗ್ಗೆ ಶಿವಕುಮಾರ್ ಒಪ್ಪಿಕೊಂಡಂತಾಗಿದೆ. ಶಿವಕುಮಾರ್ ಆರೋಪ ಮಾಡಿದರು ಕೂಡ, ಯಡಿಯೂರಪ್ಪ ಆಗಲೀ, ವಿಜಯೇಂದ್ರ ಆಗಲೀ, ರಾಘವೇಂದ್ರ ಆಗಲೀ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂದಾದರೆ ಹೊಂದಾಣಿಕೆ ರಾಜಕೀಯ ಒಪ್ಪಿಕೊಂಡಂತಾಗಿದೆ" ಎಂದು ಈಶ್ವರಪ್ಪ ತಿಳಿಸಿದರು.
ಜನರ ಕ್ಷಮೆಯನ್ನು ಕೇಳಿ: ಕೆ. ಎಸ್. ಈಶ್ವರಪ್ಪ ಮಾತನಾಡಿ, "ಇದಕ್ಕಿಂತ ನಾಚಿಕೆಗೇಡು ಮತ್ತೊಂದಿಲ್ಲ. ನೀವಿಬ್ಬರು (ವಿಜಯೇಂದ್ರ, ಯಡಿಯೂರಪ್ಪ) ತಕ್ಷಣವೇ ರಾಜ್ಯದ ಜನರ ಕ್ಷಮೆ ಕೋರಬೇಕು. ಹೊಂದಾಣಿಕೆ ರಾಜಕೀಯ ಮಾಡಿಕೊಂಡು ರಾಜ್ಯದ ಜನರ ದಾರಿ ತಪ್ಪಿಸಲಾಗುತ್ತಿದೆ. ಹೊಂದಾಣಿಕೆ ರಾಜಕೀಯ ಕೇವಲ ಶಿಕಾರಿಪುರವಲ್ಲದೇ, ರಾಜ್ಯದಲ್ಲೂ ಆಗಿರಬೇಕು. ಈ ಬಗ್ಗೆ ಡಿ. ಕೆ. ಶಿವಕುಮಾರ್ ಅವರೇ ತಿಳಿಸಬೇಕು. ಕಾಂಗ್ರೆಸ್ ಋಣದಲ್ಲಿ ನೀನಿದ್ದಿಯಾ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಶಿಕಾರಿಪುರ ಚುನಾವಣೆ ಬಗ್ಗೆ ಡಿಕೆಶಿ ಹೇಳಿದ್ದಾರೆ" ಎಂದರು.
"ಮೈಸೂರು ಚಲೋ ಪ್ರತಿಭಟನೆ ಯಾವ ಉದ್ದೇಶಕ್ಕೆ?. ಏಕೆ ಪ್ರತಿಭಟನೆ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಯಡಿಯೂರಪ್ಪ, ವಿಜಯೇಂದ್ರ, ಕಾಂಗ್ರೆಸ್ನವರು ಪ್ರತಿದಿನ ಪತ್ರಿಕೆಗಳನ್ನು ಓದಬೇಕು. ಯಾವ ವಿಚಾರಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ? ಎಂಬುದೇ ಇವರಿಗೆ ಗೊತ್ತಿಲ್ಲ" ಎಂದು ಈಶ್ವರಪ್ಪ ಲೇವಡಿ ಮಾಡಿದರು.
"ಕೇವಲ ಮುಡಾ ಬಗ್ಗೆ ಪ್ರತಿಭಟನೆ ನಡೆಯದೇ, ವೈಯಕ್ತಿಕ ಟೀಕೆಗಳನ್ನು ನಡೆಸಲಾಗುತ್ತಿದೆ. ಪರಸ್ಪರ ಆಸ್ತಿಗಳ ಬಗ್ಗೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ರಾಜಕೀಯವನ್ನೇ ನಗ್ನಾವಸ್ಥೆಗೆ ತರಲಾಗುತ್ತಿದೆ" ಎಂದು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ದೂರಿದರು.
ಶಿಕಾರಿಪುರ ಚುನಾವಣೆ ನೆನಪು: 2023ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದ ಬಿ. ವೈ. ವಿಜಯೇಂದ್ರ 81810 ಮತಗಳನ್ನು ಪಡೆದು ಜಯಗಳಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿ. ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಳಿಕ ವಿಜಯೇಂದ್ರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು, ಚುನಾವಣೆ ಗೆದ್ದರು.
ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಕಾಂಗ್ರೆಸ್ ಗೋಣಿ ಮಾಲತೇಶ್ಗೆ ಟಿಕೆಟ್ ನೀಡಿತ್ತು. ಅವರು 8101 ಮತಗಳನ್ನು ಪಡೆದು ಸೋಲು ಕಂಡರು. ಆದರೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್. ಪಿ. ನಾಗರಾಜ ಗೌಡ 70802 ಮತಗಳನ್ನು ಪಡೆದು ವಿಜಯೇಂದ್ರಗೆ ಪ್ರಬಲ ಪೈಪೋಟಿ ನೀಡಿದ್ದರು.
ಚುನಾವಣೆಯ ಸಮಯದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕೀಯ ನಡೆದಿದೆ ಎಂದು ಎಸ್. ಪಿ. ನಾಗರಾಜ ಗೌಡ ಗಂಭೀರ ಆರೋಪ ಮಾಡಿದ್ದರು. ಬಳಿಕ ಹಲವು ಬಾರಿ ಹೊಂದಾಣಿಕೆ ರಾಜಕೀಯದ ಕುರಿತು ಬಿಜೆಪಿ ನಾಯಕರೇ ಮಾತನಾಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications