Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬಿ ಗೌರವ

ಶಿವಮೊಗ್ಗ, ಮೇ 8: ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬುವ ಮೂಲಕ ಗೌರವ ಸಮರ್ಪಣೆ ಮಾಡಲಾಗಿದೆ. ಇಂದು ನಗರದಲ್ಲಿ ಈ ಕಾರ್ಯಕ್ರಮ ನಡೆದಿದೆ.

ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ 19ರ ತುರ್ತು ಪರಿಸ್ಥಿತಿಯಲ್ಲಿ ಹಗಲು ರಾತ್ರಿಯನ್ನದೇ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಶ್ಲಾಘಿಸಿ ಉಡಿ ತುಂಬುವ ಮೂಲಕ ಅವರ ಸೇವೆಗೆ ವಿಶಿಷ್ಟವಾಗಿ ಶುಭ ಕೋರಲಾಗಿದೆ. ಐದಾರು ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ವಿಧಾನ ಪರಿಷತ್ ಸದಸ್ಯರಾದ ಶ್ರೀ ಆಯನೂರು ಮಂಜುನಾಥ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಈ ಕಾಂತೇಶ್ ಭಾಗಿಯಾಗಿದ್ದರು. ಅವರೊಂದಿಗೆ ನಗರ ಬಿಜೆಪಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

KS Eshwarappa Thanked Anganwadi Workers

ಒಂದು ಕಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ಘಟನೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಇಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಸಹ ಮಾಡಲಾಗುತ್ತಿದೆ. ಇದು ನಿಜಕ್ಕೂ ಅಂಗನವಾಡಿ ಕಾರ್ಯಕರ್ತೆಯರಿಗೆ ಖುಷಿ ನೀಡುವ ವಿಷಯವಾಗಿದೆ.

KS Eshwarappa Thanked Anganwadi Workers

ಕೊರೊನಾ ವಾರಿಯರ್ಸ್‌ ಆಗಿ ದಿಟ್ಟ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಂತಹ ಕಾರ್ಯಕ್ರಮಗಳಿಂದ ಇನ್ನಷ್ಟು ಪ್ರೋತ್ಸಾಹ, ಸ್ಫೂರ್ತಿ ಸಿಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+