ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬಿ ಗೌರವ

|
Google Oneindia Kannada News

ಶಿವಮೊಗ್ಗ, ಮೇ 8: ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬುವ ಮೂಲಕ ಗೌರವ ಸಮರ್ಪಣೆ ಮಾಡಲಾಗಿದೆ. ಇಂದು ನಗರದಲ್ಲಿ ಈ ಕಾರ್ಯಕ್ರಮ ನಡೆದಿದೆ.

ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ 19ರ ತುರ್ತು ಪರಿಸ್ಥಿತಿಯಲ್ಲಿ ಹಗಲು ರಾತ್ರಿಯನ್ನದೇ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಶ್ಲಾಘಿಸಿ ಉಡಿ ತುಂಬುವ ಮೂಲಕ ಅವರ ಸೇವೆಗೆ ವಿಶಿಷ್ಟವಾಗಿ ಶುಭ ಕೋರಲಾಗಿದೆ. ಐದಾರು ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಘನತ್ಯಾಜ್ಯ ವಿಲೇವಾರಿಗೆ ಗ್ರಾ.ಪಂ.ಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಈಶ್ವರಪ್ಪ ಸೂಚನೆಘನತ್ಯಾಜ್ಯ ವಿಲೇವಾರಿಗೆ ಗ್ರಾ.ಪಂ.ಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಈಶ್ವರಪ್ಪ ಸೂಚನೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಆಯನೂರು ಮಂಜುನಾಥ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಈ ಕಾಂತೇಶ್ ಭಾಗಿಯಾಗಿದ್ದರು. ಅವರೊಂದಿಗೆ ನಗರ ಬಿಜೆಪಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

KS Eshwarappa Thanked Anganwadi Workers

ಒಂದು ಕಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ಘಟನೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಇಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಸಹ ಮಾಡಲಾಗುತ್ತಿದೆ. ಇದು ನಿಜಕ್ಕೂ ಅಂಗನವಾಡಿ ಕಾರ್ಯಕರ್ತೆಯರಿಗೆ ಖುಷಿ ನೀಡುವ ವಿಷಯವಾಗಿದೆ.

KS Eshwarappa Thanked Anganwadi Workers

ಕೊರೊನಾ ವಾರಿಯರ್ಸ್‌ ಆಗಿ ದಿಟ್ಟ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಂತಹ ಕಾರ್ಯಕ್ರಮಗಳಿಂದ ಇನ್ನಷ್ಟು ಪ್ರೋತ್ಸಾಹ, ಸ್ಫೂರ್ತಿ ಸಿಗುತ್ತದೆ.

English summary
KS Eshwarappa and Ayanur Manjunath thanked anganwadi workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X