ಮಂಗಳೂರು-ಶಿವಮೊಗ್ಗ-ಬಳ್ಳಾರಿ ನಡುವೆ ರಾಜಹಂಸ ಸೇವೆ
ಶಿವಮೊಗ್ಗ, ಜನವರಿ 29 : ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ಹೊಸ ರಾಜಹಂಸ ಬಸ್ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಕೆಎಸ್ಆರ್ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಜನವರಿ 23ರಿಂದಲೇ ಬಸ್ಗಳು ಸಂಚಾರ ನಡೆಸುತ್ತಿವೆ ಎಂದು ಪ್ರಕಟಣೆ ಹೇಳಿದೆ.
ಪ್ರಯಾಣದರ ಕಡಿತಗೊಳಿಸಿದ ಕೆಎಸ್ಆರ್ಟಿಸಿ
ರಾಜಹಂಸ ಬಸ್ ಮಂಗಳೂರು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಡಲಿದೆ. ಉಡುಪಿ, ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚನ್ನಗಿರಿ, ಹೊಳಲ್ಕೆರೆ, ಚಳ್ಳೆಕೆರೆ, ಚಿತ್ರದುರ್ಗ ಮಾರ್ಗವಾಗಿ ಸಂಚಾರ ನಡೆಸಲಿದ್ದು, ಬೆಳಗ್ಗೆ 6.30ಕ್ಕೆ ಬಳ್ಳಾರಿ ತಲುಪಲಿದೆ.
ಐಎಎಸ್ ಅಧಿಕಾರಿ ಆಗುವ ಹಂತದಲ್ಲಿ ಬಸ್ ಕಂಡಕ್ಟರ್...!
ಬಳ್ಳಾರಿಯಿಂದ ಸಂಜೆ 5.35ಕ್ಕೆ ಹೊರಡುವ ಬಸ್ ಶಿವಮೊಗ್ಗದಿಂದ ರಾತ್ರಿ 11.30ಕ್ಕೆ ಹೊರಟು ಮರುದಿನ ಬೆಳಗ್ಗೆ 5 ಗಂಟೆಗೆ ಮಂಗಳೂರಿಗೆ ತಲುಪಲಿದೆ ಎಂದು ಕೆಎಸ್ಆರ್ಟಿಸಿ ಹೇಳಿದೆ.
ಕೆಎಸ್ಆರ್ಟಿಸಿ ನೌಕರರಿಗೆ ಸಿಹಿಸುದ್ದಿ ನೀಡಿದ ಹೈಕೋರ್ಟ್
ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಈ ಬಸ್ ಸೇವೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.