ಕುಮಾರಸ್ವಾಮಿಗೆ ಕುಮಾರ ಬಂಗಾರಪ್ಪ ಎಸೆದ ವಿಚಿತ್ರ ಸವಾಲು!
Recommended Video

ಶಿವಮೊಗ್ಗ, ಅಕ್ಟೋಬರ್ 30: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಬಾಂಬ್ ಸಿಡಿಸಿರುವ ಸೊರಬ ಶಾಸಕ ಕುಮಾರ್ ಬಂಗಾರಪ್ಪ, ರಾಧಿಕಾರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತೆ ಸವಾಲು ಹಾಕಿದ್ದಾರೆ.
ಕುಮಾರಸ್ವಾಮಿ ತಮ್ಮ ಕಟುಂಬದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಮಾರ್ ಬಂಗಾರಪ್ಪ, ಕುಮಾರಸ್ವಾಮಿಯವರು ಎಚ್ಚರದಿಂದ ಇರಬೇಕು ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಮಿಟೂ ಬಾಂಬ್ ಸಿಡಿಯುವ ಸಾಧ್ಯತೆ ಇದೆ.
ಸಾಮಾಜಿಕ ಜಾಲತಾಣ ಈಗಾಗಲೇ ಅವರ ಮತ್ತೊಂದು ಕುಟುಂಬದ ಫೋಟೊಗಳು ಓಡಾಡುತ್ತಿವೆ, ಅವರಿಗೆ ಧೈರ್ಯವಿದ್ದರೆ ಹಾಸನದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಿ ಅಥವಾ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಅವರ ಕುಟುಂಬದಲ್ಲಿ ಈಗಾಗಲೇ ಒಬ್ಬ ಪತ್ನಿ ರಾಮನಗರದಿಂದ ಸ್ಪರ್ಧಿಸುತ್ತಿದ್ದಾರೆ, ಅವರ ಕುಟುಂಬದ ಸದಸ್ಯರು ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.ಹಾಗೆಯೇ ರಾಧಿಕಾರನ್ನು ಯಾಕೆ ಚುನಾವಣಾ ಪ್ರಚಾರಕ್ಕೆ ಕರೆಸಿಕೊಳ್ಳಬಾರದು ಎಂದರು.
ಬೇರೆಯವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವ ಕುಮಾರಸ್ವಾಮಿಯವರಿಗೆ ತಮ್ಮ ಬಗ್ಗೆ ಗೊತ್ತಿರಬೇಕು, ಇಂತಹ ರಾಜಕಾರಣ ಸರಿಯಲ್ಲ, ಮುಂದಿನ ದಿನಗಳಲ್ಲಿ ಅವರು ಇದಕ್ಕೆ ಬೆಲೆ ತೆರಬೇಕಾದೀತು ಎಂದಿದ್ದಾರೆ.
ನಿನ್ನೆಯಷ್ಟೇ ಬಹಿರಂಗ ಪ್ರಚಾರದಲ್ಲಿ ಭಾಗಿಯಾಗಿದ್ದ ಕುಮಾರಸ್ವಾಮಿ ಕುಮಾರ ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆ ವೇಳೆ ದಿವಂಗತ ಬಂಗಾರಪ್ಪ ಅವರನ್ನು ಕುಮಾರ್ ಬಂಗಾರಪ್ಪ ಅವರು ಮನೆಯಿಂದ ಓಡಿಸಿದ್ದರು ಎಂದು ಹೇಳಿದ್ದರು. ಅದಕ್ಕೆ ಕುಮಾರ್ ಬಂಗಾರಪ್ಪ ರಾಧಿಕಾ ಅವರ ಹೆಸರು ಬಳಸಿ ವಾಗ್ದಾಳಿ ನಡೆಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications