ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಇನ್ನೊಬ್ಬರ ಹೆಗಲನ್ನು ಆಶ್ರಯಿಸುವುದೇ ಕುಮಾರಸ್ವಾಮಿ ಹವ್ಯಾಸವಾಗಿದೆ'

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 05: ಎರಡು ಬಾರಿ ಲಾಟರಿ ಹೊಡೆದಂತೆ ಸಿ.ಎಂ.ಆಗಿರುವ ಎಚ್.ಡಿ. ಕುಮಾರಸ್ವಾಮಿಯವರು ಅಂಗವಿಕಲ ಪಕ್ಷವಾಗಿರುವ ಜೆಡಿಎಸ್ ಪಕ್ಷದ ನೇತಾರರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್‌ ವ್ಯಂಗ್ಯವಾಡಿದರು.

ಇಂದು ಮಂಗಳವಾರ ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇನ್ನೊಬ್ಬರ ಹೆಗಲನ್ನು ಆಶ್ರಯಿಸುವುದೇ ಕುಮಾರಸ್ವಾಮಿ ಅವರ ಹವ್ಯಾಸವಾಗಿದೆ.ಇದೀಗ ಕಾಂಗ್ರೆಸ್ ಹೆಗಲ ಮೇಲೆ ಕೂತಿರುವ ಜೆಡಿಎಸ್ ನವರು ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅವಲಂಬಿಸಿದರೆ ಆಶ್ಚರ್ಯ ಪಡಬೇಕಿಲ್ಲ. ಆದ್ದರಿಂದಲೇ ನನ್ನ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಬಿಜೆಪಿಯವರೇ ರಕ್ಷಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದರು.

ರಥ ಎಳೆಯುವಾಗ ಅಡ್ಡಿಯಾಗುವಂತೆ ಬಿಜೆಪಿಯವರು ಅಡ್ಡ ಬರ್ತಿದ್ದಾರೆ: ಎಚ್‌ಡಿಕೆ ಆರೋಪರಥ ಎಳೆಯುವಾಗ ಅಡ್ಡಿಯಾಗುವಂತೆ ಬಿಜೆಪಿಯವರು ಅಡ್ಡ ಬರ್ತಿದ್ದಾರೆ: ಎಚ್‌ಡಿಕೆ ಆರೋಪ

ಮೋದಿ ತರಹ ಡೋಂಗಿ ಬಜೆಟ್ ಮಂಡಿಸುವುದಿಲ್ಲ ಎಂದು ರಾಜ್ಯದ ಡೋಂಗಿ ಮುಖ್ಯಮಂತ್ರಿ ಹೇಳಿದ್ದಾರೆ. ಮೋದಿ ಬಗ್ಗೆ ಡೋಂಗಿ ಪದ ಬಳಸಿರುವುದಕ್ಕೆ ಬೇಸರವಿದೆ. ಆದರೆ ಅವರು ಹೇಳಿರುವಂತೆ ಉತ್ತಮ ಬಜೆಟ್ ಕೊಡುತ್ತಾರೆಂಬ ನಿರೀಕ್ಷೆ ಇದೆ. ಕಳೆದ ಆರು ತಿಂಗಳ ಹಿಂದೆ ಡೋಂಗಿ ಬಜೆಟ್ ನೀಡಿದ ಮುಖ್ಯಮಂತ್ರಿಯಿಂದ 8ನೇ ತಾರೀಖು ಬಹುನಿರೀಕ್ಷಿತ ಬಜೆಟ್ ರಾಜ್ಯದ ಜನತೆ ನಿರೀಕ್ಷಿಸುತ್ತಿದ್ದಾರೆಂದರು.

Kumaraswamy dependent on someone:Ayanur Manjunath

 ಭಾವುಕತೆ ನನ್ನ ರಕ್ತದಲ್ಲೇ ಇದೆ, ಜನರಿಗೆ ನನ್ನ ಬಗ್ಗೆ ಅನುಕಂಪವಿದೆ: ಕುಮಾರಸ್ವಾಮಿ ಭಾವುಕತೆ ನನ್ನ ರಕ್ತದಲ್ಲೇ ಇದೆ, ಜನರಿಗೆ ನನ್ನ ಬಗ್ಗೆ ಅನುಕಂಪವಿದೆ: ಕುಮಾರಸ್ವಾಮಿ

ಕಾನೂನು ಸುವ್ಯವಸ್ಥೆ ಪರಿಶೀಲನೆಗಾಗಿ ಶಿವಮೊಗ್ಗಕ್ಕೆ ಆಗಮಿಸುವಂತೆ ಕೋರಿ ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲರಿಗೆ ಪತ್ರ ಬರೆದಿದ್ದೇನೆ. ಸುಸಂಸ್ಕೃತ ಹಾಗೂ ಶಾಂತಿಪ್ರಿಯ ಜಿಲ್ಲೆಯಾಗಿರುವ ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಅಯೋಮಯವಾಗಿದೆ. ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಒಮ್ಮೆ ಜಿಲ್ಲೆಗೆ ಭೇಟಿ ನೀಡಬೇಕೆಂದು ಪತ್ರ ಬರೆದಿದ್ದೇನೆ ಎಂದರು.

English summary
BJP Leader Ayanur Manjunath talked about Chief minister Kumaraswamy politics. He said Kumaraswamy dependent on someone. It's their hobby.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X