ತೀರ್ಥಹಳ್ಳಿ: ತುಂಗಾ ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಕಾರಣ ಆ ಫೋಟೋ!
ಶಿವಮೊಗ್ಗ, ಜುಲೈ.22: ಕ್ಷುಲ್ಲಕ ಕಾರಣಕ್ಕೆ ಕುರುವಳ್ಳಿ ಹುಡುಗರು ಮತ್ತು ತುಂಗಾ ಕಾಲೇಜಿನ ಕೆಲ ಹುಡುಗರ ನಡುವೆ ನಡೆದ ಜಗಳದಲ್ಲಿ ನಾಲ್ವರು ಹುಡುಗರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ನಡೆಸಿದ ಕುರುವಳ್ಳಿಯ ಐವರು ಹುಡುಗರ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ತೀರ್ಥಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಪಟ್ಟಣದ ಕೊಪ್ಪ ಸರ್ಕಲ್ ಬಳಿ, ತೀರ್ಥಹಳ್ಳಿ ಪೊಲೀಸರು ಐಎಂವಿ ಕೇಸು ಹಾಕುತ್ತಿದ್ದ ವೇಳೆ, ಕುರುವಳ್ಳಿ ಹುಡುಗರ ಬುಲೆಟ್ ಬೈಕ್ ತಡೆದು ಕೇಸ್ ಹಾಕಿದರು. ಇದನ್ನು ತುಂಗಾ ಕಾಲೇಜಿನ ಕೆಲ ಹುಡುಗರು ಫೋಟೋ ತೆಗೆದು ವಾಟ್ಸಾಪ್ ನ ಸ್ಟೇಟಸ್ ಗಳಲ್ಲಿ ಹಾಕಿದ್ದರು.
ತುಂಗಾ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳಾದ ಅನಿಲ್ ಮತ್ತು ಕಾರ್ತಿಕ್ ವಾಟ್ಸಾಪ್ ನಲ್ಲಿ ಈ ಫೋಟೊಗಳನ್ನು ಶೇರ್ ಮಾಡಿ ವಾಟ್ಸಾಪ್ ನ ಡಿಪಿ, ಸ್ಟೇಟಸ್ ನಲ್ಲಿ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು "ವಾಟ್ಸಾಪ್ ಗ್ರೂಪ್ ಗಳಲ್ಲಿ ಬೈಕ್ ಫೋಟೋ ಯಾಕೆ ಹಾಕಿದ್ದೀರಿ"?ಎಂದು ಕುರುವಳ್ಳಿ ಹುಡುಗರು ತುಂಗಾ ಕಾಲೇಜಿನ ಹುಡುಗರನ್ನು ವಿಚಾರಿಸಿದ್ದಾರೆ.
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ. ಹೊರಗಿನ ಹುಡುಗರು ಕುರುವಳ್ಳಿ ಹುಡುಗರ ಜೊತೆ ಕೈ ಜೋಡಿಸಿದ್ದರ ಪರಿಣಾಮ ಕಾಲೇಜಿನ ವಿದ್ಯಾರ್ಥಿಗಳಾದ ಶಬರೀಶ್, ಅನಿಲ್, ಸೂರಜ್, ಅಭಿಲಾಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇವರನ್ನು ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ಸೇರಿಸಲಾಗಿದೆ.
ಆಸ್ಪತ್ರೆಗೆ ಸೇರಿದ್ದ ಈ ನಾಲ್ವರು ವಿದ್ಯಾರ್ಥಿಗಳು ಮೇಲಿನ ಕುರುವಳ್ಳಿ ಅಕ್ಷಯ್ ಶೆಟ್ಟಿ, ಭರತ್,ಸುರೇಶ, ಅನಿಲ್, ಮೇಘರಾಜ್ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದು, ತೀರ್ಥಹಳ್ಳಿ ಪೊಲೀಸರು ಹೇಳಿಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications