ಕುವೆಂಪು ಅವರ ಪದ್ಮವಿಭೂಷಣ ಫಲಕ ಇನ್ನೂ ಸಿಕ್ಕಿಲ್ಲ
ಶಿವಮೊಗ್ಗ, ಡಿಸೆಂಬರ್ 02 : ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆದರೆ, ಆತ ಕದ್ದ ಪದ್ಮವಿಭೂಷಣ ಫಲಕ ಇನ್ನೂ ಪತ್ತೆಯಾಗಿಲ್ಲ. ಫಲಕ ಹುಡುಕಿಕೊಟ್ಟವರಿಗೆ 10 ಸಾವಿರ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ.
ಕುವೆಂಪು ಅವರ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ತಾಲೂಕು ತುರ್ಚಘಟ್ಟದ ರೇವಣಸಿದ್ಧಪ್ಪ ಅಲಿಯಾಸ್ ಕಾಯಕದ ರೇವಣ್ಣ (45)ನನ್ನು ಪೊಲೀಸರು ನವೆಂಬರ್ 26ರಂದು ಬಂಧಿಸಿದ್ದಾರೆ. ಆದರೆ, ಕಳುವು ಮಾಡಿದ್ದ ಪದ್ಮವಿಭೂಷಣ ಫಲಕ ಮಾತ್ರ ಸಿಕ್ಕಿಲ್ಲ. [ಕುವೆಂಪು ಮನೆಯಲ್ಲಿ ಕಳ್ಳತನ ಮಾಡಿದ ಸಿಕ್ಕಿದ]

ಮನೆಯಿಂದ ಕಳವು ಮಾಡಿ ಪರಾರಿಯಾಗುವಾಗ ಪದ್ಮವಿಭೂಷಣ ಫಲಕವನ್ನು ರೇವಣಸಿದ್ಧಪ್ಪ ಎಲ್ಲೋ ಬೀಳಿಸಿಕೊಂಡಿದ್ದಾನೆ. ಈ ಕುರಿತು ಪೊಲೀಸರಿಗೆ ವಿಚಾರಣೆ ವೇಳೆ ಆತ ಹೇಳಿಕೊಂಡಿದ್ದಾನೆ. ಫಲಕ ಬಿದ್ದ ಜಾಗ ಕಾಡಿನ ಪ್ರದೇಶವಾದ ಕಾರಣ ಅದನ್ನು ಹುಡುಕುವುದು ಕಷ್ಟವಾಗುತ್ತಿದೆ. [ಕುವೆಂಪು ಅವರ ಮನೆಯಲ್ಲಿ ಕಳ್ಳತನ]
1988ರಲ್ಲಿ ಕುವೆಂಪು ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿತ್ತು. ಪ್ರಶಸ್ತಿ ಜೊತೆಗೆ 4.4 ಸೆಂ.ಮೀ. ಸುತ್ತಳತೆ ಹಾಗೂ 0.6 ಸೆಂ.ಮೀ. ದಪ್ಪದ ಫಲಕ ನೀಡಲಾಗಿತ್ತು. ಚಿಕ್ಕ ಫಲಕವನ್ನು ಕಾಡಿನ ನಡುವೆ ಹುಡುಕುವುದು ಪೊಲೀಸರಿಗೆ ಸವಾಲಾಗಿದೆ. [ಅರ್ಥಪೂರ್ಣ ತೀರ್ಥಹಳ್ಳಿಯ ಸಾರ್ಥಕ ಪ್ರವಾಸ]
ಕಾಡಿನಲ್ಲಿ ಗಿಡಗಳ ಎಲೆಗಳು ಉದುರಿ ಬೀಳುತ್ತಿವೆ. ಉದುರಿ ಬಿದ್ದ ಒಣಎಲೆಗಳ ಅಡಿ ಚಿಕ್ಕ ಗಾತ್ರದ ಪದ್ಮವಿಭೂಷಣ ಫಲಕ ಹುಡುಕುವುದು ಕಷ್ಟವಾಗುತ್ತಿದೆ. ಆದ್ದರಿಂದ ಪೊಲೀಸರು ಜನರ ಸಹಾಯ ಕೇಳಿದ್ದಾರೆ. ಫಲಕವನ್ನು ಪತ್ತೆ ಹಚ್ಚಿ ನೀಡಿದರೆ 10 ಸಾವಿರ ರೂ. ಬಹುಮಾನ ನೀಡುವುದಾಗಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications