ಮಗಳ ಹುಟ್ಟುಹಬ್ಬಕ್ಕೆ ಸರ್ಕಾರಿ ಲೆಟರ್ ಹೆಡ್ನಲ್ಲಿ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ
ಶಿವಮೊಗ್ಗ, ಮೇ 22: ಸುತ್ತೋಲೆ ಹೊರಡಿಸುವ ಮಾದರಿಯಲ್ಲೇ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳು ತಮ್ಮ ಮಗಳ ಹುಟ್ಟುಹಬ್ಬಕ್ಕೆ ಅತಿಥಿಗಳಿಗೆ ಆಹ್ವಾನ ನೀಡಿದ್ದು, ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕುವೆಂಪು ವಿವಿ ಕುಲಪತಿಗಳ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಯಾವುದೇ ಸಚಿವರಾಗಿರಲಿ, ಶಾಸಕರಾಗಲಿ ಅಥವಾ ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ಖಾಸಗಿಯಾಗಿಯೇ ಆಹ್ವಾನಿಸುತ್ತಾರೆ. ಸರ್ಕಾರದ ಲೆಟರ್ಹೆಡ್ನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ.

ಆದರೆ, ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಮ್ಮ ಮಗಳ ಹುಟ್ಟುಹಬ್ಬಕ್ಕೆ ಸರ್ಕಾರದ ಲೆಟರ್ಹೆಡ್ನಲ್ಲಿ ಸುತ್ತೋಲೆ ಹೊರಡಿಸಿ ಅತಿಥಿಗಳಿಗೆ ಆಹ್ವಾನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯ ಕುಲಪತಿ ಹೊರಡಿಸಿರುವ ಸುತ್ತೋಲೆ ಪತ್ರ ಎಲ್ಲೆಡೆ ವೈರಲ್ ಆಗಿದ್ದು, ಪರ-ವಿರೋಧಗಳ ಮಾತು ಕೇಳಿಬರುತ್ತಿದೆ. ಅಲ್ಲದೆ ಈ ಮೂಲಕ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಎಡವಟ್ಟು ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ.

ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು, "ನನ್ನ ಮಗಳು ಆಕಾಂಕ್ಷಾ ಬಿ.ವಿ ಜನ್ಮದಿನದ ಪ್ರಯುಕ್ತ ದಿನಾಂಕ 28-5-2023ರ ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕುಲಪತಿಗಳ ಗೃಹದಲ್ಲಿ ಸಂತೋಷಕೂಟ ಏರ್ಪಡಿಸಿದೆ".
"ಎಲ್ಲಾ ಅಧ್ಯಾಪಕರು, ಅಧ್ಯಾಪಕೇತರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರು ತಪ್ಪದೇ ಹಾಜರಾಗಬೇಕೆಂದು ಕೋರಲಾಗಿದೆ. ಇದನ್ನು ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಈ ಸಂತೋಷಕೂಟದಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ". ಇದು ಫರ್ಮಾನು ಹೊರಡಿಸಿದ ರೀತಿಯಲ್ಲಿದೆ ಎಂಬ ಟೀಕೆ ವ್ಯಕ್ತವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications