ಕುವೆಂಪು ವಿವಿ ನಕಲಿ ಅಂಕಪಟ್ಟಿ ಹಗರಣ, ನಾಲ್ವರು ವಜಾ
ಶಿವಮೊಗ್ಗ, ಅಕ್ಟೋಬರ್ 25 : ಕುವೆಂಪು ವಿಶ್ವವಿದ್ಯಾಲಯದ ನಕಲಿ ಅಂಕಪಟ್ಟಿ, ಉತ್ತರ ಪತ್ರಿಕೆ ಬದಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. 2012ರ ಮೇ ತಿಂಗಳಿನಲ್ಲಿ ಈ ಹಗರಣ ಬಯಲಿಗೆ ಬಂದಿತ್ತು.
ಕುವೆಂಪು ವಿಶ್ವವಿದ್ಯಾಲಯ ಸೋಮವಾರ ನಕಲಿ ಅಂಕಪಟ್ಟಿ ಮತ್ತು ಉತ್ತರ ಪತ್ರಿಕೆ ಬದಲಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಜಾಗೊಳಿಸಿ, ಮತ್ತೆ ನಾಲ್ವರಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದರು.

ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದ ನಕಲಿ ಅಂಕಪಟ್ಟಿ, ಉತ್ತರ ಪತ್ರಿಕೆ ಬದಲಿ ಮತ್ತು ಅಂಕ ತಿದ್ದುತ್ತಿದ್ದ ದೊಡ್ಡ ಹಗರಣ 2012ರ ಮೇ ನಲ್ಲಿ ಬಯಲಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 9 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿದ್ದ 9 ಮಂದಿಯಲ್ಲಿ ಒಬ್ಬರು ವಿಚಾರಣೆ ಹಂತದಲ್ಲಿಯೇ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಉಳಿದವರ ವಿರುದ್ಧ ಅರೋಪ ಸಾಬೀತಾಗಿದ್ದು, ಕುಲಪತಿ ಪ್ರೊ.ಜೋಗನ್ ಶಂಕರ್ ಸೂಚನೆಯಂತೆ ಕುಲಸಚಿವ ಪ್ರೊ.ಎಚ್.ಎಸ್.ಭೋಜ್ಯಾನಾಯ್ಕ್ ವಜಾ ಮತ್ತು ಹಿಂಬಡ್ತಿ ಆದೇಶ ಹೊರಡಿಸಿದ್ದಾರೆ.
ವಜಾಗೊಂಡವರು : ವಿಶ್ವವಿದ್ಯಾನಿಲಯ ಪರೀಕ್ಷಾಂಗ ವಿಭಾಗದ ಕಿರಿಯ ಸಹಾಯಕರಾದ ಶಿವಕುಮಾರ್, ಸಿದ್ದಾಚಾರ್ಯ, ರಮೇಶ್ ಹಾಗೂ ಎಲ್.ರಾಮು.
ಹಿಂಬಡ್ತಿ ಪಡೆದವರು : ಸಹಾಯಕ ಕುಲಸಚಿವ ಎಂ.ಜೆ.ಪಾಲಾಕ್ಷಿನಾಯ್ಕ್, ಕಿರಿಯ ಸಹಾಯಕರಾದ ಪೀರ್ಯಾನಾಯ್ಕ್, ಎಚ್.ತಿಮ್ಮಯ್ಯ ಮತ್ತು ಮದನ್.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications