Breaking; ಗುಡ್ಡ ಕುಸಿತ, ಆಗುಂಬೆ ಘಾಟ್ ರಸ್ತೆ ಬಂದ್
ಶಿವಮೊಗ್ಗ, ಜುಲೈ 10; ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಶಿವಮೊಗ್ಗ-ಉಡುಪಿ ನಡುವಿನ ವಾಹನಗಳ ಸಂಚಾರ ಘಾಟ್ ರಸ್ತೆಯಲ್ಲಿ ಸಂಪೂರ್ಣ ಬಂದ್ ಆಗಿದೆ.
ಭಾನುವಾರ ಸೋಮೇಶ್ವರ ಕಡೆಯಿಂದ ಬರುವ ಮಾರ್ಗದ 3ನೇ ತಿರುವಿನಲ್ಲಿ ಗುಡ್ಡ ಕುಸಿದಿದೆ. ಮರಗಳು ಸಹ ರಸ್ತೆ ಮೇಲೆ ಉರುಳಿದೆ. ಇದರಿಂದಾಗಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ತೀರ್ಥಹಳ್ಳಿ-ಹೆಬ್ರಿ ನಡುವಿನ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಸೋಮೇಶ್ವರ ಬಳಿಯೇ ಈ ಕುರಿತು ವಾಹನ ಸವಾರರಿಗೆ ಮಾಹಿತಿ ನೀಡಲಾಗುತ್ತಿದೆ. ತೀರ್ಥಹಳ್ಳಿ ಕಡೆಯಿಂದ ಬರುವ ವಾಹನಗಳನ್ನು ಆಗುಂಬೆ ಘಾಟ್ ಚೆಕ್ ಪೋಸ್ಟ್ ಬಳಿಯೇ ತಡೆಯಲಾಗುತ್ತಿದೆ.

ಅರಣ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಎಷ್ಟು ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಮಣ್ಣು, ಮರಗಳನ್ನು ತೆರವು ಮಾಡಿದ ಬಳಿಕ ವಾಹನ ಸಂಚಾರ ಮತ್ತೆ ಆರಂಭಿಸುವ ಕುರಿತು ಮಾಹಿತಿ ಲಭ್ಯವಾಗಲಿದೆ.
ಕಳೆದ ಒಂದು ವಾರದಿಂದ ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಸ್ಥಳೀಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಶನಿವಾರ ಒಂದೇ ದಿನ ಆಗುಂಬೆಯಲ್ಲಿ 164.5 ಮಿ. ಮೀ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತ್ಯಧಿಕ ಪ್ರಮಾಣದ ಮಳೆ ಶನಿವಾರ ಆಗುಂಬೆಯಲ್ಲಿ ಸುರಿದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ.
ಆಗುಂಬೆ ಘಾಟಿಯಲ್ಲಿ ಗುಡ್ಡಕುಸಿತ,
— Karnataka Rains⛈️ (@Karnatakarains) July 10, 2022
ಶಿವಮೊಗ್ಗ-ಉಡುಪಿ ವಾಹನಗಳ ರಸ್ತೆ ಸಂಚಾರ ಬಂದ್. #Agumbe #WesternGhats #Landslides #SaveAgumbe #Karnatakarains pic.twitter.com/ukB5ilbevZ
ತೀರ್ಥಹಳ್ಳಿ ಶಾಸಕ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications