ಶಿವಮೊಗ್ಗ:12 ಪಾರಂಪರಿಕ ಕಟ್ಟಡಗಳ 3ಡಿ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ
ಶಿವಮೊಗ್ಗ, ಸೆಪ್ಟೆಂಬರ್ 17: ಶಿವಮೊಗ್ಗ ಜಿಲ್ಲೆಯ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಅವರು ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಈ ತಂತ್ರಜ್ಞಾನ ಸ್ಮಾರಕಗಳ ಮೂಲಭೂತ ಸ್ವರೂಪವನ್ನು ನಿರ್ಧರಿಸಲು ಮತ್ತು ಪಾರಂಪರಿಕ ತಾಣಗಳ ಸೌಲಭ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ. ಇದರಿಂದ ಡಿಜಿಟಲ್ ಪುನರ್ ನಿರ್ಮಾಣ ಮತ್ತು ಸ್ಮಾರಕಗಳ ಮಾಪನ ವಿಶ್ಲೇಷಣೆ ಮಾಡಬಹುದಾಗಿದೆ ಎಂದರು.
ಪ್ರಸ್ತುತ ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಾಲಯ, ಶ್ರೀ ಭೀಮೇಶ್ವರ ದೇವಾಲಯ, ಕುಸ್ಕೂರಿನ ಶ್ರೀ ಭೀಮೇಶ್ವರ ದೇವಾಲಯ, ಭದ್ರಾವತಿಯ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯ, ಹೊಸನಗರ ತಾಲೂಕಿನ ಸಾಲಗೇರಿಯ ಉಮಾಪತಿ ದೇವಾಲಯ, ಶಿವಪ್ಪ ನಾಯಕನ ಗೋಪುರ, ಶಿಕಾರಿಪುರ-ಚಿಕ್ಕಮಾಗಡಿ ಜೈನ ಬಸದಿ, ನರಸಾಪುರ ಬಸದಿ, ಸೊರಬ ತಾಲೂಕಿನ ಪುರ ಗ್ರಾಮದ ಸೋಮೇಶ್ವರ ದೇವಾಲಯ, ದವನಿ ಭೈಲಿನ ಕಪಿಲೇಶ್ವರ ದೇವಾಲಯಗಳ 3ಡಿ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸ್ಮಾರಕಗಳು ಹಾನಿಗೊಳಗಾದರೆ, ಕಟ್ಟಡಗಳ ಮರು ನಿರ್ಮಾಣಕ್ಕೆ ಈ ತಂತ್ರಜ್ಞಾನ ಸಹಕಾರಿಯಾಗಿದೆ. ಡಿಜಿಟಲೀಕರಣದ ಮೂಲಕ ಸ್ಮಾರಕಗಳ ಅಳತೆ, ಆಳ, ಅಗಲ, ಸ್ಮಾರಕಕ್ಕೆ ಬಳಸಲಾಗಿರುವ ಸಾಮಾಗ್ರಿ, ನಿರ್ಮಾಣಗೊಂಡ ವರ್ಷ, ಯಾರ ಕಾಲದಲ್ಲಿ ನಿರ್ಮಾಣಗೊಂಡಿದೆ, ವರ್ಷ ಮತ್ತು ಐತಿಹಾಸಿಕ ವಿವರಗಳು, ವಾಸ್ತು ಶಿಲ್ಪದ ಶೈಲಿಯನ್ನು ಸಹ ಕ್ರೋಢೀಕರಿಸಿ ಸಂಗ್ರಹಿಸಲಾಗುತ್ತದೆ.
ಈ ಮಾಹಿತಿಯು ಸಂಶೋಧಕರಿಗೆ, ಇತಿಹಾಸಕಾರರಿಗೆ ಅನೇಕ ವಿವರಗಳೊಂದಿಗೆ ಇತಿಹಾಸವನ್ನು ಪುನರ್ ನಿರ್ಮಿಸಲು ಅವಕಾಶ ಕಲ್ಪಿಸುತ್ತದೆ ಎಂದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾ ಮಂಡಳಿಯ ರಾಜಶೇಖರ್, ಸಚಿನ್, ಎನ್ಆರ್ಡಿಎಂಎಸ್ ಸಂಸ್ಥೆಯ ಶಂಕರ್ ಇದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications