ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಶ್ವರಪ್ಪಗೆ ಜೀವ ಬೆದರಿಕೆ ಕರೆ, ಎಸ್‌ಪಿಗೆ ದೂರು

|
Google Oneindia Kannada News

Recommended Video

KS Eshwarappa has received threat call from unknown person | Oneindia Kannada

ಶಿವಮೊಗ್ಗ, ಸೆಪ್ಟೆಂಬರ್ 7 : ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಶಿವಮೊಗ್ಗ ಎಸ್ಪಿಗೆ ಈಶ್ವರಪ್ಪ ಈ ಕುರಿತು ದೂರು ನೀಡಿದ್ದಾರೆ.

ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನ

ಬುಧವಾರ ಕೆ.ಎಸ್.ಈಶ್ವರಪ್ಪ ಅವರು ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ಶಿವಮೊಗ್ಗ ಎಸ್ಪಿ ಅಭಿನವ್ ಖರೆ ಅವರಿಗೆ ದೂರು ನೀಡಿದ್ದಾರೆ. ಕನ್ನಡ ಮಿಶ್ರಿತ ಉರ್ದು ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎಚ್.ಎಂ.ರೇವಣ್ಣಗೆ ಕೊಲೆ ಬೆದರಿಕೆಎಚ್.ಎಂ.ರೇವಣ್ಣಗೆ ಕೊಲೆ ಬೆದರಿಕೆ

Life threat to KS Eshwarappa complaint filed

ಸೆ.5ರಂದು ಮಧ್ಯಾಹ್ನ 2.30ಕ್ಕೆ ಬೆದರಿಕೆ ಕರೆ ಬಂದಿದೆ. 'ಮುಸ್ಲಿಂ ವಿರೋಧಿಯಾದ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಈಶ್ವರಪ್ಪ ದೂರು ಕೊಟ್ಟಿದ್ದಾರೆ.

ಹಿಂದೂ ವಿರೋಧಿಗಳನ್ನು ಕೊಲ್ಲದೆ ಬಿಡಲಾರೆ : ರವಿ ಪೂಜಾರಿಹಿಂದೂ ವಿರೋಧಿಗಳನ್ನು ಕೊಲ್ಲದೆ ಬಿಡಲಾರೆ : ರವಿ ಪೂಜಾರಿ

ಜೀವ ಬೆದರಿಕೆ ಹಾಕಿರುವ ಜೊತೆ ಅವಚ್ಯಾ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈಶ್ವರಪ್ಪ ದೂರಿನಲ್ಲಿ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಸಂಸದ ಪ್ರತಾಪ್ ಸಿಂಹ, ಡಿ.ಕೆ.ಸುರೇಶ್ ಮತ್ತು ಸಚಿವ ಎಚ್.ಎಂ.ರೇವಣ್ಣ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು. ಸಚಿವ ವಿನಯ್ ಕುಲಕರ್ಣಿ ಅವರಿಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

English summary
BJP leader and Legislative council opposition member KS Eshwarappa received life threat call from an unknown person. Eshwarappa filed a complaint to Shivamogga SP Abhinav Khare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X