ಲಿಂಗನಮಕ್ಕಿ ಜಲಾಶಯ ಭರ್ತಿ, ಪ್ರವಾಹದ ಎಚ್ಚರಿಕೆ
ಶಿವಮೊಗ್ಗ, ಜುಲೈ 24 : ರಾಜ್ಯದ ವಿದ್ಯುತ್ ಉತ್ಪಾದನೆಯ ಪ್ರಮುಖ ಜಲಾಶಯ ಲಿಂಗನಮಕ್ಕಿ ಶೀಘ್ರದಲ್ಲೇ ಭರ್ತಿಯಾಗಲಿದೆ. ಜಲಾಶಯದಲ್ಲಿ 1802 ಅಡಿ ನೀರು ಸಂಗ್ರಹವಾಗಿದ್ದು, ನದಿ ಪಾತ್ರದ ಜನರಿಗೆ ಈಗಾಗಲೇ ಎಚ್ಚರಿಕೆ ಇಂದ ಇರುವಂತೆ ಸೂಚನೆ ನೀಡಲಾಗಿದೆ.
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಆದ್ದರಿಂದ, 1819 ಅಡಿ ಎತ್ತರದ ಡ್ಯಾಂಗೆ ಒಳ ಹರಿವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಲಿಂಗನಮಕ್ಕಿ ಡ್ಯಾಂ ಕೆಳದಂಡೆ ಹಾಗೂ ಶರಾವತಿ ನದಿ ಪಾತ್ರದ ನಿವಾಸಿಗಳಿಗೆ, ಪ್ರವಾಹದ ಮುನ್ಸೂಚನೆ ನೀಡಿದೆ.
ನಿರಂತರ ಮಳೆಯಿಂದ ಲಿಂಗನಮಕ್ಕಿ ಡ್ಯಾಂಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಜುಲೈ 23ರಂದು 1802.30 ಅಡಿ ನೀರಿನ ಸಂಗ್ರಹವಿದೆ. 28,799 ಕ್ಯುಸೆಕ್ ನೀರು ಹರಿದುಬರುತ್ತಿದೆ. ಇದೇ ರೀತಿ ಒಳಹರಿವು ಮುಂದುವರಿದರೆ, ಶೀಘ್ರದಲ್ಲಿಯೇ ಡ್ಯಾಂ ಗರಿಷ್ಠ ಮಟ್ಟ ತಲುಪಲಿದೆ.

'ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಡ್ಯಾಂನಿಂದ ಯಾವುದೇ ಸಮಯದಲ್ಲಿ ಬೇಕಾದರೂ ಹೊರಬಿಡಲಾಗುವುದು. ಆದ್ದರಿಂದ, ಕೆಳದಂಡೆ, ನದಿ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಜಾನುವಾರುಗಳನ್ನು ಬಿಡಬಾರದು' ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರ ಆರ್.ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಮುಂದುವರೆದಿದೆ. ಸೋಮವಾರದ ಮಾಹಿತಿಯಂತೆ ಶಿವಮೊಗ್ಗದಲ್ಲಿ 1.80 ಮಿ.ಮೀಟರ್, ಭದ್ರಾವತಿಯಲ್ಲಿ 1.60 ಮಿ.ಮೀ., ತೀರ್ಥಹಳ್ಳಿಯಲ್ಲಿ 24.20 ಮಿ.ಮೀ., ಸಾಗರದಲ್ಲಿ 9.20 ಮಿ.ಮೀ., ಶಿಕಾರಿಪುರದಲ್ಲಿ 1.80 ಮಿ.ಮೀ. ಸೊರಬದಲ್ಲಿ 6.50 ಮಿ.ಮೀ. ಮಳೆಯಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications