ಶಿವಮೊಗ್ಗ; ಆಸ್ತಿ ತೆರಿಗೆ ಪಾವತಿಗೆ ಹೊಸ ವ್ಯವಸ್ಥೆ
ಶಿವಮೊಗ್ಗ, ಜೂನ್ 07; ಕೋವಿಡ್ ಹರಡುವಿಕೆ ನಿಯಂತ್ರಣಕ್ಕಾಗಿ ಸರ್ಕಾರ ಜೂನ್ 14ರ ತನಕ ಲಾಕ್ಡೌನ್ ವಿಸ್ತರಣೆ ಮಾಡಿದೆ. ಇದರಿಂದಾಗಿ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಆಸ್ತಿ ತೆರಿಗೆ ಪಾವತಿಸಲು ಜನರು ಕಚೇರಿಗೆ ಬರಲು ಅವಕಾಶವಿಲ್ಲ.
ಆಸ್ತಿ ತೆರಿಗೆದಾರರು ಇರುವ ಸ್ಥಳಕ್ಕೇ ಪಾಲಿಕೆಯ ಕರ ವಸೂಲಿಗಾರರು ಬಂದು ಇಡಿಸಿ ಯಂತ್ರಗಳ ಮೂಲಕ ಆಸ್ತಿ ತೆರಿಗೆಯನ್ನು ಕಟ್ಟಿಸಿಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಲಾಕ್ಡೌನ್ ಅಂತ್ಯಗೊಂಡ ಬಳಿಕ ಪಾಲಿಕೆ ಆವರಣದಲ್ಲಿಯೇ ಕೌಂಟರ್ಗಳನ್ನು ತೆರೆಯಲಾಗುತ್ತದೆ.
ಸರ್ಕಾರದ 30/6/2021ರ ಆದೇಶದ ಅನ್ವಯ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ 5ರ ತೆರಿಗೆ ರಿಯಾಯಿತಿ ಸೌಲಭ್ಯದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜನರು ಈ ರಿಯಾಯಿತಿ ಸೌಲಭ್ಯವನ್ನು ಪಡೆದು ಆಸ್ತಿ ತೆರಿಗೆ ಪಾವತಿಸಬಹುದು.

ಲಾಕ್ಡೌನ್ ಹಿನ್ನಲೆಯಲ್ಲಿ ಜನರು ಆಸ್ತಿ ತೆರಿಗೆಯನ್ನು ಮಹಾನಗರಪಾಲಿಕೆ ವೆಬ್ಸೈಟ್ ಮುಖಾಂತರ ಸಹ ಪಾವತಿ ಮಾಡಬಹುದು. ಯುಪಿಐ ಮೊಬೈಲ್ ಆ್ಯಪ್ಗಳಾದ ಪೇಟಿಎಂ, ಫೋನ್ ಪೇ, ಗೂಗಲ್ ಪೇ ಇತರೆ ಮೂಲಕ ಸಹ ತೆರಿಗೆ ಪಾವತಿ ಮಾಡಲು ಅವಕಾಶವಿದೆ.
ಪಾಲಿಕೆಯಿಂದ ನೇಮಕವಾದ ಕರ ವಸೂಲಿಗಾರರು ಮನೆ ಮನೆಗೆ ತೆರಳಿ ತೆರಿಗೆಯನ್ನು ಪಡೆದು ರಸೀದಿಯನ್ನು ನೀಡಲಿದ್ದಾರೆ. ಆದ್ದರಿಂದ ಮಾಲೀಕರು ಇದರ ಸದುಪಯೋಗ ಪಡೆದು ಆಸ್ತಿ ತೆರಿಗೆ ಪಾವತಿಸಿ ಪಾಲಿಕೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರದಿಂದ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿತ್ತು. ಪ್ರಸ್ತುತ ಸಂಪೂರ್ಣ ಲಾಕ್ಡೌನ್ ಅಂತ್ಯಗೊಂಡಿದ್ದು, ಜೂನ್ 14ರ ತನಕ ಸರ್ಕಾರ ಘೋಷಣೆ ಮಾಡಿರುವ ಲಾಕ್ಡೌನ್ ನಿಯಮಗಳು ಜಾರಿಯಲ್ಲಿರಲಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications