Annamalai: ಯಡಿಯೂರಪ್ಪ ದತ್ತು ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಮತಬೇಟೆ: ಅಣ್ಣಾಮಲೈ ಭಾಗಿ
ಉಡುಪಿ, ಮೇ 04: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ದತ್ತು ಕ್ಷೇತ್ರ ಎಂದೇ ಗುರುತಿಸಿಕೊಂಡಿರುವ ಬೈಂದೂರಿನಲ್ಲಿ ಬಿಜೆಪಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುವ ಬೈಂದೂರಿನಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ರೋಡ್ ಶೋ ಮಾಡುವ ಮೂಲಕ ಮತದಾರರನ್ನು ಸೆಳೆದರು. ಬಿರು ಬಿಸಿಲಿನ ನಡುವೆಯೂ ಸಾವಿರಾರು ಕಾರ್ಯಕರ್ತರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಒಂದಾದ ಬೈಂದೂರು ವಿಧಾನಸಭಾ ಕ್ಷೇತ್ರ ಜಿಲ್ಲೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವಂತ ಕ್ಷೇತ್ರ. ಜಿಲ್ಲೆಯ ಉಳಿದ ನಾಲ್ಕು ಕ್ಷೇತ್ರಗಳು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬಂದರೆ ಬೈಂದೂರು ವಿಧಾನಸಭಾ ಕ್ಷೇತ್ರ ಮಾತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಯಲ್ಲಿ ಮಾತ್ರ ಎರಡು ಹಂತದ ಚುನಾವಣೆಯನ್ನ ನೋಡಬಹುದಾಗಿದೆ.
ಸದ್ಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದು ಮೇ 7ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗಾಗಿ ಬೈಂದೂರು ಸಿದ್ಧಗೊಂಡಿದೆ. ಹಾಲಿ ಸಂಸದ ಬಿ.ವೈ ರಾಘವೇಂದ್ರ ಈ ಬಾರಿ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹಾಗೂ ಮತ್ತಿತರ ಬಿಜೆಪಿ ಮುಖಂಡರ ಜೊತೆಗೆ ಮತದಾರರನ್ನು ಸೆಳೆಯುವುದಕ್ಕಾಗಿ ಇಂದು ರೋಡ್ ಶೋ ನಡೆಸಿದರು.

ಹುಬ್ಬಳ್ಳಿಯಿಂದ ನೇರವಾಗಿ ಬೈಂದೂರಿಗೆ ಆಗಮಿಸಿದ ಬಿ.ಎಸ್ ಯಡಿಯೂರಪ್ಪ ಹಾಗೂ ಅಣ್ಣಾಮಲೈ, ಬೈಂದೂರಿನ ಕ್ರಾಸ್ ಬಳಿ ರೋಡ್ ಶೋಗಾಗಿ ಸಿದ್ಧಪಡಿಸಿದ್ದ ರಥವೇರಿ ಬೈಂದೂರು ನಗರದಾದ್ಯಂತ ರೋಡ್ ಶೋ ನಡೆಸಿದರು. ಕಾರ್ಯಕರ್ತರಿಂದ ಮತ ಪ್ರಚಾರ ನಡೆದಿದೆ ಇವತ್ತಿನ ರೋಡ್ ಶೋ ಕೇವಲ ಬೈಂದೂರು ಪ್ರಚಾರದ ಫೈನಲ್ ಟಚ್ ಅಪ್ ಎಂದು ಪುತ್ರ ಬಿ.ವೈ ರಾಘವೇಂದ್ರ ಹೇಳಿದರೆ, ಬಿ.ಎಸ್ ಯಡಿಯೂರಪ್ಪ ಮಾತನಾಡಿ ದೇಶದಲ್ಲಿ ಏನ್ಡಿಎ ಮಿತ್ರಕೂಟ 400 ಸೀಟುಗಳನ್ನು ಗೆಲ್ಲುತ್ತದೆ. ನರೇಂದ್ರ ಮೋದಿಯವರ ಅಭಿವೃದ್ಧಿ ಕೆಲಸ ಕೈ ಹಿಡಿಯುತ್ತದೆ. ಮೋದಿ ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ರಾಜ್ಯದಲ್ಲಿ ನಾವು ಈ ಬಾರಿ 28ಕ್ಕೆ 28 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.
ಇನ್ನು ರೋಡ್ ಶೋನಲ್ಲಿ ಭಾಗಿಯಾಗಿದ್ದ ಅಣ್ಣಾಮಲೈ ಮಾತನಾಡಿ, ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಹತಾಶಗೊಂಡಿದೆ ಕಾಂಗ್ರೆಸ್ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿ ವೈ ರಾಘವೇಂದ್ರ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ ಎಂದಿದ್ದಾರೆ.

ಬೈಂದೂರಿನಲ್ಲಿ ಹಾಲಿ ಸಂಸದ ಬಿವೈ ರಾಘವೇಂದ್ರ ಪರವಾಗಿ ಬಿಜೆಪಿ ಭರ್ಜರಿ ರೋಡ್ ಶೋ ನಡೆದಿದೆ. ತಮ್ಮ ನಾಯಕನ ರೋಡ್ ಶೋನಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗುವ ಮೂಲಕ ಬಿಜೆಪಿ ಪಕ್ಷವನ್ನ ಬೆಂಬಲಿಸಿದ್ದಾರೆ. ಇನ್ನು ಮೇ 7ರಂದು ನಡೆಯಲಿರುವ ಮತದಾನದಲ್ಲಿ ಮತದಾರ ಪ್ರಭು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications