Get Updates
Get notified of breaking news, exclusive insights, and must-see stories!

KS Eshwarappa: ಬಂಡಾಯ ಶಮನ ಯತ್ನಗಳು ಟುಸ್: ಕೆಎಸ್ ಈಶ್ವರಪ್ಪ ಸ್ಪರ್ಧೆ ಫಿಕ್ಸ್!

ಶಿವಮೊಗ್ಗ, ಮಾರ್ಚ್ 18: ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಕೆ ಎಸ್ ಈಶ್ವರಪ್ಪ ಅವರನ್ನು ಸಮಾಧಾನಪಡಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಪ್ರಯತ್ನ ಮಾಡಿದ್ದಾರೆ. ಆದರೆ, ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಲ್ಲಿ ದೃಢವಾಗಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಸ್ಪರ್ಧಿಸಲಿದ್ದಾರೆ. ರಾಧಾ ಮೋಹನ್ ದಾಸ್ ಅಗರ್ವಾಲ್ ಪಕ್ಷದ ಇತರ ಕೆಲವು ಹಿರಿಯ ಪದಾಧಿಕಾರಿಗಳೊಂದಿಗೆ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಚುನಾವಣೆಗೆ ಸ್ಪರ್ಧಿಸದಂತೆ ಮನವೊಲಿಸಲು ಪ್ರಯತ್ನಿಸಿದ್ದರು.

Lok Sabha Election 2024 Rebel Eshwarappa firm on contesting Lok Sabha poll

ಆದರೆ, ಈಶ್ವರಪ್ಪ ತಮ್ಮ ನಿರ್ಧಾರದಲ್ಲಿ ಅಚಲರಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಜೊತೆಗೆ ತಮ್ಮ ಮನಸ್ಸನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೆಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಾ ಮೋಹನ್ ದಾಸ್ ಅಗರ್ವಾಲ್, ಇದು ಅವರ ವೈಯಕ್ತಿಕ ಭೇಟಿಯಾಗಿದ್ದು, ರಾಜಕೀಯಕ್ಕೂ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

"ನಾವು ಒಂದೇ ಪಕ್ಷದ ಸ್ನೇಹಿತರು. ಇದು ನಮ್ಮ ವೈಯಕ್ತಿಕ ಭೇಟಿಯಾಗಿತ್ತು. ನಾನು ಅವನ ಕುಟುಂಬದೊಂದಿಗೆ ಮಾತಿಗೆ ಕುಳಿತಿದ್ದೆ. ಅಲ್ಲಿ ಮಕ್ಕಳಿದ್ದರು. ನಾವು ಮಕ್ಕಳೊಂದಿಗೆ ರಾಜಕೀಯ ಮಾತನಾಡುವುದಿಲ್ಲ. ಕುಟುಂಬವನ್ನು ಭೇಟಿ ಮಾಡುವುದು ನನಗೆ ರಾಜಕೀಯ ವಿಷಯವಲ್ಲ" ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ತಾವು ಈಶ್ವರಪ್ಪ ಅವರ ಮನವೊಲಿಸಲು ಬಂದಿರಲಿಲ್ಲ ಎಂಬುದನ್ನು ಹೇಳಲು ಯತ್ನಿಸಿದ್ದಾರೆ.

Lok Sabha Election 2024 Rebel Eshwarappa firm on contesting Lok Sabha poll

ತಮ್ಮ ಪುತ್ರ ಕೆಇ ಕಾಂತೇಶ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕೆಎಸ್ ಈಶ್ವರಪ್ಪ ಭಾನುವಾರ ಮತ್ತೊಮ್ಮೆ ಆಕ್ರೋಶ ಹೊರಹಾಕಿದ್ದಾರೆ. ಸೋಮವಾರ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಅವರ ತವರು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರಬೇಕು ಮತ್ತು ಪಕ್ಷವನ್ನು ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಹಿಡಿತದಿಂದ ಮುಕ್ತಗೊಳಿಸಬೇಕು. ಆ ಉದ್ದೇಶದಿಂದ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ' ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೇಂದ್ರ ಮಟ್ಟದ ಬಿಜೆಪಿ ನಾಯಕರು ಯಡಿಯೂರಪ್ಪ ಮಾತ್ರ ತಮಗೆ ಚುನಾವಣೆಯಲ್ಲಿ ಸ್ಥಾನ ಗಳಿಸಲು ನೆರವಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಕೆಟ್ಟ ರಾಜಕೀಯದ ಬಗ್ಗೆ ನಾವು ಕೇಂದ್ರ ನಾಯಕತ್ವಕ್ಕೆ ತಿಳಿಸಬೇಕು. ನಾವು ಕಾಂಗ್ರೆಸ್ ಅನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಕುಟುಂಬದಿಂದ ನಿಯಂತ್ರಿಸುವ ಪಕ್ಷ ಎಂದು ಕರೆಯುತ್ತೇವೆ. ಅದಕ್ಕಾಗಿ ಮೋದಿ ಕೂಡ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಈಗ ಕರ್ನಾಟಕದಲ್ಲಿ ಬಿಜೆಪಿ ಕಾಂಗ್ರೆಸ್‌ ಅಂತಾಗುತ್ತಿದೆ ಎಂದು ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

"ಯಡಿಯೂರಪ್ಪ ಈಗ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಅವರ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಒಂದು ಕುಟುಂಬದ ಹಿಡಿತದಲ್ಲಿರುವ ಇಡೀ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ತತ್ವಗಳಿಗೆ ವಿರುದ್ಧವಾಗಿದೆ. ಇದನ್ನು ನಾನು ಪ್ರತಿಭಟಿಸುತ್ತಿದ್ದೇನೆ ಎಂದು ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ಅರ್ಥ ಮಾಡಿಕೊಳ್ಳುತ್ತಾರೆ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ" ಎಂದು ತಮ್ಮ ನಿಲುವು ಖಚಿತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+