KS Eshwarappa: ಬಂಡಾಯ ಶಮನ ಯತ್ನಗಳು ಟುಸ್: ಕೆಎಸ್ ಈಶ್ವರಪ್ಪ ಸ್ಪರ್ಧೆ ಫಿಕ್ಸ್!
ಶಿವಮೊಗ್ಗ, ಮಾರ್ಚ್ 18: ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಕೆ ಎಸ್ ಈಶ್ವರಪ್ಪ ಅವರನ್ನು ಸಮಾಧಾನಪಡಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಪ್ರಯತ್ನ ಮಾಡಿದ್ದಾರೆ. ಆದರೆ, ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಲ್ಲಿ ದೃಢವಾಗಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಸ್ಪರ್ಧಿಸಲಿದ್ದಾರೆ. ರಾಧಾ ಮೋಹನ್ ದಾಸ್ ಅಗರ್ವಾಲ್ ಪಕ್ಷದ ಇತರ ಕೆಲವು ಹಿರಿಯ ಪದಾಧಿಕಾರಿಗಳೊಂದಿಗೆ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಚುನಾವಣೆಗೆ ಸ್ಪರ್ಧಿಸದಂತೆ ಮನವೊಲಿಸಲು ಪ್ರಯತ್ನಿಸಿದ್ದರು.

ಆದರೆ, ಈಶ್ವರಪ್ಪ ತಮ್ಮ ನಿರ್ಧಾರದಲ್ಲಿ ಅಚಲರಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಜೊತೆಗೆ ತಮ್ಮ ಮನಸ್ಸನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೆಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಾ ಮೋಹನ್ ದಾಸ್ ಅಗರ್ವಾಲ್, ಇದು ಅವರ ವೈಯಕ್ತಿಕ ಭೇಟಿಯಾಗಿದ್ದು, ರಾಜಕೀಯಕ್ಕೂ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
"ನಾವು ಒಂದೇ ಪಕ್ಷದ ಸ್ನೇಹಿತರು. ಇದು ನಮ್ಮ ವೈಯಕ್ತಿಕ ಭೇಟಿಯಾಗಿತ್ತು. ನಾನು ಅವನ ಕುಟುಂಬದೊಂದಿಗೆ ಮಾತಿಗೆ ಕುಳಿತಿದ್ದೆ. ಅಲ್ಲಿ ಮಕ್ಕಳಿದ್ದರು. ನಾವು ಮಕ್ಕಳೊಂದಿಗೆ ರಾಜಕೀಯ ಮಾತನಾಡುವುದಿಲ್ಲ. ಕುಟುಂಬವನ್ನು ಭೇಟಿ ಮಾಡುವುದು ನನಗೆ ರಾಜಕೀಯ ವಿಷಯವಲ್ಲ" ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ತಾವು ಈಶ್ವರಪ್ಪ ಅವರ ಮನವೊಲಿಸಲು ಬಂದಿರಲಿಲ್ಲ ಎಂಬುದನ್ನು ಹೇಳಲು ಯತ್ನಿಸಿದ್ದಾರೆ.

ತಮ್ಮ ಪುತ್ರ ಕೆಇ ಕಾಂತೇಶ್ಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕೆಎಸ್ ಈಶ್ವರಪ್ಪ ಭಾನುವಾರ ಮತ್ತೊಮ್ಮೆ ಆಕ್ರೋಶ ಹೊರಹಾಕಿದ್ದಾರೆ. ಸೋಮವಾರ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಅವರ ತವರು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರಬೇಕು ಮತ್ತು ಪಕ್ಷವನ್ನು ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಹಿಡಿತದಿಂದ ಮುಕ್ತಗೊಳಿಸಬೇಕು. ಆ ಉದ್ದೇಶದಿಂದ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ' ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಮಟ್ಟದ ಬಿಜೆಪಿ ನಾಯಕರು ಯಡಿಯೂರಪ್ಪ ಮಾತ್ರ ತಮಗೆ ಚುನಾವಣೆಯಲ್ಲಿ ಸ್ಥಾನ ಗಳಿಸಲು ನೆರವಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಕೆಟ್ಟ ರಾಜಕೀಯದ ಬಗ್ಗೆ ನಾವು ಕೇಂದ್ರ ನಾಯಕತ್ವಕ್ಕೆ ತಿಳಿಸಬೇಕು. ನಾವು ಕಾಂಗ್ರೆಸ್ ಅನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಕುಟುಂಬದಿಂದ ನಿಯಂತ್ರಿಸುವ ಪಕ್ಷ ಎಂದು ಕರೆಯುತ್ತೇವೆ. ಅದಕ್ಕಾಗಿ ಮೋದಿ ಕೂಡ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಈಗ ಕರ್ನಾಟಕದಲ್ಲಿ ಬಿಜೆಪಿ ಕಾಂಗ್ರೆಸ್ ಅಂತಾಗುತ್ತಿದೆ ಎಂದು ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.
"ಯಡಿಯೂರಪ್ಪ ಈಗ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಅವರ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಒಂದು ಕುಟುಂಬದ ಹಿಡಿತದಲ್ಲಿರುವ ಇಡೀ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ತತ್ವಗಳಿಗೆ ವಿರುದ್ಧವಾಗಿದೆ. ಇದನ್ನು ನಾನು ಪ್ರತಿಭಟಿಸುತ್ತಿದ್ದೇನೆ ಎಂದು ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ಅರ್ಥ ಮಾಡಿಕೊಳ್ಳುತ್ತಾರೆ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ" ಎಂದು ತಮ್ಮ ನಿಲುವು ಖಚಿತಪಡಿಸಿದ್ದಾರೆ.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications