'ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪಾಪದ ಕೊಡ'
ಶಿವಮೊಗ್ಗ, ಜನವರಿ 28 : 'ಸಾಲ ಮೇಳದ ಸಂಗ್ರಾಮ ಜನಾರ್ದನ ಪೂಜಾರಿ ಅವರ ಆತ್ಮ ಚರಿತ್ರೆಯಲ್ಲ. ಪೂಜಾರಿಯವರ ಪಾಪದ ಕೊಡ' ಎಂದು ಸೊರಬ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
ಸೊರಬದಲ್ಲಿ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆತ್ಮ ಚರಿತ್ರೆಯಲ್ಲಿ ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಬಗ್ಗೆ ಪುಸ್ತಕದಲ್ಲಿ ತಪ್ಪು ಸಂದೇಶ ನೀಡಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು. 'ಪುಸ್ತಕ ಪೂಜಾರಿಯವರ ಪಾಪದ ಕೊಡ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ಬಂಗಾರಪ್ಪ ಅವರು ಇಂದಿರಾ ಗಾಂಧಿಯವರನ್ನು ನಿಂದಿಸಿ ಹಲ್ಲೆಗೆ ಮುಂದಾಗಿದ್ದರು ಎಂಬ ತಪ್ಪು ಸಂದೇಶ ನೀಡಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ' ಎಂದು ಸ್ಪಷ್ಟನೆ ನೀಡಿದರು.
'ಇಂತಹ ತಪ್ಪು ಮಾಹಿತಿ ನೀಡುವ ಮೂಲಕ ಸಮಾಜಕ್ಕೆ ತಪ್ಪು ಸಂದೇಶರವಾನೆ ಮಾಡಿದ್ದಾರೆ. ಬಂಗಾರಪ್ಪ ಅಭಿಮಾನಿಗಳಿಂದ ಜನಾರ್ದನ ಪೂಜಾರಿ ಅವರ ವಿರುದ್ಧ ಕಾನೂನು ಹೋರಾಟ ಮಾಡಲಾಗುತ್ತದೆ' ಎಂದು ಮಧು ಬಂಗಾರಪ್ಪ ಹೇಳಿದರು.
'ಸಾಲ ಮೇಳದ ಸಂಗ್ರಾಮ ಪುಸ್ತಕ ಸುಳ್ಳಿನ ಕಂತೆ. ಜನರ್ದಾನ ಪೂಜಾರಿ ಇವತ್ತು ಯಾವ ಸ್ಥಿತಿಯಲ್ಲಿ ಇದಾರೋ ಗೊತ್ತಿಲ್ಲ?. ಅರಳು ಮರಳು ಪರಿಸ್ಥಿತಿಯಲ್ಲಿ ಇರಬಹುದು' ಎಂದು ಮಧು ಬಂಗಾರಪ್ಪ ಟೀಕಿಸಿದರು.
ಜನವರಿ 26ರಂದು ಜನಾರ್ದನ ಪೂಜಾರಿ ಆತ್ಮ ಚರಿತ್ರೆ ಬಿಡುಗಡೆಯಾಗಿದೆ. ಪೂಜಾರಿ ಅವರ ರಾಜಕೀಯ ಜೀವನದ ಏಳು-ಬೀಳು ಸೇರಿದಂತೆ ವಿವಿಧ ವಿಚಾರಗಳನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications