ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪಾಪದ ಕೊಡ'

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜನವರಿ 28 : 'ಸಾಲ ಮೇಳದ ಸಂಗ್ರಾಮ ಜನಾರ್ದನ ಪೂಜಾರಿ ಅವರ ಆತ್ಮ ಚರಿತ್ರೆಯಲ್ಲ. ಪೂಜಾರಿಯವರ ಪಾಪದ ಕೊಡ' ಎಂದು ಸೊರಬ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ಸೊರಬದಲ್ಲಿ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆತ್ಮ ಚರಿತ್ರೆಯಲ್ಲಿ ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಪೂಜಾರಿ ಆತ್ಮಕಥೆ 'ಸಾಲಮೇಳದ ಸಂಗ್ರಾಮ' ಬಿಡುಗಡೆಪೂಜಾರಿ ಆತ್ಮಕಥೆ 'ಸಾಲಮೇಳದ ಸಂಗ್ರಾಮ' ಬಿಡುಗಡೆ

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಬಗ್ಗೆ ಪುಸ್ತಕದಲ್ಲಿ ತಪ್ಪು ಸಂದೇಶ ನೀಡಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು. 'ಪುಸ್ತಕ ಪೂಜಾರಿಯವರ ಪಾಪದ ಕೊಡ' ಎಂದು ಆಕ್ರೋಶ ವ್ಯಕ್ತಪಡಿಸಿದರು.

Madhu Bangarappa

'ಬಂಗಾರಪ್ಪ ಅವರು ಇಂದಿರಾ ಗಾಂಧಿಯವರನ್ನು ನಿಂದಿಸಿ ಹಲ್ಲೆಗೆ ಮುಂದಾಗಿದ್ದರು ಎಂಬ ತಪ್ಪು ಸಂದೇಶ ನೀಡಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ' ಎಂದು ಸ್ಪಷ್ಟನೆ ನೀಡಿದರು.

ಪೂಜಾರಿ ಆತ್ಮಚರಿತ್ರೆ, ರಾಜ್ಯ ರಾಜಕಾರಣದಲ್ಲಿ ತಳಮಳಪೂಜಾರಿ ಆತ್ಮಚರಿತ್ರೆ, ರಾಜ್ಯ ರಾಜಕಾರಣದಲ್ಲಿ ತಳಮಳ

'ಇಂತಹ ತಪ್ಪು ಮಾಹಿತಿ ನೀಡುವ ಮೂಲಕ ಸಮಾಜಕ್ಕೆ ತಪ್ಪು ಸಂದೇಶರವಾನೆ ಮಾಡಿದ್ದಾರೆ. ಬಂಗಾರಪ್ಪ ಅಭಿಮಾನಿಗಳಿಂದ ಜನಾರ್ದನ ಪೂಜಾರಿ ಅವರ ವಿರುದ್ಧ ಕಾನೂನು ಹೋರಾಟ ಮಾಡಲಾಗುತ್ತದೆ' ಎಂದು ಮಧು ಬಂಗಾರಪ್ಪ ಹೇಳಿದರು.

'ಸಾಲ ಮೇಳದ ಸಂಗ್ರಾಮ ಪುಸ್ತಕ ಸುಳ್ಳಿನ ಕಂತೆ. ಜನರ್ದಾನ ಪೂಜಾರಿ ಇವತ್ತು ಯಾವ ಸ್ಥಿತಿಯಲ್ಲಿ ಇದಾರೋ ಗೊತ್ತಿಲ್ಲ?. ಅರಳು ಮರಳು ಪರಿಸ್ಥಿತಿಯಲ್ಲಿ ಇರಬಹುದು' ಎಂದು ಮಧು ಬಂಗಾರಪ್ಪ ಟೀಕಿಸಿದರು.

ಜನವರಿ 26ರಂದು ಜನಾರ್ದನ ಪೂಜಾರಿ ಆತ್ಮ ಚರಿತ್ರೆ ಬಿಡುಗಡೆಯಾಗಿದೆ. ಪೂಜಾರಿ ಅವರ ರಾಜಕೀಯ ಜೀವನದ ಏಳು-ಬೀಳು ಸೇರಿದಂತೆ ವಿವಿಧ ವಿಚಾರಗಳನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

English summary
JDS leader and Soraba MLA Madhu Bangarappa expressed unhappiness about senior Congress leader Janardhana Poojari autobiography Sala Melada Sangarama. Autobiography had several false information about his father S.Bangarappa said, Madhu Bangarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X