ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನಾವು ಸೋತಿದ್ದರೂ ಕುಮಾರಸ್ವಾಮಿ ಸಿಎಂ ಆಗಿರುವುದು ಸಂತಸ ತಂದಿದೆ'

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್.29: ನಾವು ಸೋತಿದ್ದರೂ ಕುಮಾರಸ್ವಾಮಿ ಸಿಎಂ ಆಗಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ ಜೆಡಿಎಸ್ ಘಟಕದಲ್ಲಿ ಇಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಕಾರ್ಯಕ್ರಮ ಮತ್ತು ಹೋರಾಟ ಮುಂದುವರಿಯಲಿದೆ. ರಾಜ್ಯಕ್ಕೆ ಒಳ್ಳೆಯ ನಾಯಕತ್ವ ನೀಡಲು ಸಿಎಂ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ.

ಸೆಪ್ಟಂಬರ್ 3ರಂದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ? ಸೆಪ್ಟಂಬರ್ 3ರಂದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ?

ನಾವು ಸೋತಿರಬಹುದು. ಆದರೆ ಹೀನಾಯವಾಗಿ ಸೋಲನ್ನು ಅನುಭವಿಸಲ್ಲ. ಚುನಾವಣೆ ಸೋಲಿನಿಂದ ಈಗಾಗಲೇ ಹೊರ ಬಂದಿದ್ದೇವೆ. ನಮ್ಮ ತಂದೆ ಅವರು ಕೊನೆಯ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ರಾಜಕಿಯದಲ್ಲಿ ಸೋಲು ಗೆಲುವು ಸಾಮಾನ್ಯ. ಜನರ ಸೇವೆ ಮಾಡುವುದು ಮುಖ್ಯ ಎಂದರು.

Madhu Bangarappa says we are happy for Kumaraswamy is Chief Minister

ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಆರಂಭಗೊಂಡಿದ್ದು, ಹೊಸ ಅಧ್ಯಕ್ಷರ ನೇಮಕ ಹೊಸ ಹುರುಪು ತಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದ ನಂತರ ಸಿದ್ಧತೆ ಮತ್ತು ಹೋರಾಟ ಆರಂಭಗೊಳ್ಳಲಿದೆ.

ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ಸೇರಿದಂತೆ ಯಾವುದೇ ಸ್ಥಾನಮಾನವನ್ನು ನಾನು ಬಯಸಿಲ್ಲ. ಅದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಮಧು ಬಂಗಾರಪ್ಪ ತಿಳಿಸಿದರು.

ಸಿದ್ದರಾಮಯ್ಯ ಅವರ ಹೊಗಳಿ ಕುಮಾರಸ್ವಾಮಿಗೆ ಎಚ್ಚರಿಕೆ ನೀಡಿದ ಕೈ ಶಾಸಕ ಸಿದ್ದರಾಮಯ್ಯ ಅವರ ಹೊಗಳಿ ಕುಮಾರಸ್ವಾಮಿಗೆ ಎಚ್ಚರಿಕೆ ನೀಡಿದ ಕೈ ಶಾಸಕ

ಇನ್ನು ಕೊಡಗು ಪ್ರವಾಹ ಕುರಿತು ಮಾತನಾಡಿದ ಅವರು, ಮಳೆ ಅನಾಹುತದಿಂದ ಸಾಕಷ್ಟು ಹಾನಿಯಾಗಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ನಿಖರವಾದ ನಷ್ಟದ ಚಿತ್ರಣ ತಿಳಿಯಲು ಇನ್ನಷ್ಟು ಸಮಯವಾಗಲಿದೆ ಎಂದರು.

English summary
Madhu Bangarappa said We may have defeat. But they have not suffered a crushing defeat. We already come out of election defeat. We are happy for Kumaraswamy is Chief Minister
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X