ಶಿವಮೊಗ್ಗ ಉಪ ಚುನಾವಣೆ : ಮಧು ಬಂಗಾರಪ್ಪ ಬಹಿರಂಗ ಪತ್ರ
Recommended Video

ಶಿವಮೊಗ್ಗ, ನವೆಂಬರ್ 08 : ಶಿವಮೊಗ್ಗ ಲೋಕಸಭಾಸ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಗಿದಿದೆ. ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ.
ತಮ್ಮ ಫೇಸ್ಬುಕ್ ಪುಟ Madhu.bangarappaji ಯಲ್ಲಿ ಅವರು ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ, ಕ್ಷೇತ್ರದ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 'ನನ್ನ ಮೇಲೆ ನಂಬಿಕೆ ಇಟ್ಟು ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಹಿರಿಯರು, ಮುಖಂಡರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ನೆಚ್ಚಿನ ಮತದಾರರೆಲ್ಲರಿಗೂ ನನ್ನ ಮನಃಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿ, ಅಭಿಮಾನ, ನಂಬಿಕೆ, ವಿಶ್ವಾಸಕ್ಕೆ ನಾನೆಂದೂ ಚಿರರುಣಿ ಎಂದು ಬರೆದಿದ್ದಾರೆ.
ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದರು. 4,91,158 ಮತಗಳನ್ನು ಪಡೆದು ಮಧು ಬಂಗಾರಪ್ಪ ಅವರು ಸೋಲು ಅನುಭವಿಸಿದ್ದರು.

ಮಧು ಬಂಗಾರಪ್ಪ ಹೇಳಿದ್ದೇನು?
ನನ್ನ ಮೇಲೆ ನಂಬಿಕೆಯಿಟ್ಟು ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿಕೂಟದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿ,ಈ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ, ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು.

ಹಲವು ನಾಯಕರಿಗೆ ಧನ್ಯವಾದ
ವಿಶೇಷವಾಗಿ ನನ್ನ ಮಾರ್ಗದರ್ಶಕರು, ಹಿರಿಯರು, ನನ್ನ ತಂದೆ ಸಮಾನರು, ಮಾಜಿ ಪ್ರಧಾನಿಗಳಾದ ಜೆಡಿಎಸ್ ಪಕ್ಷದ ರಾಷ್ಟೀಯ ಅಧ್ಯಕ್ಷರಾದ ದೇವೇಗೌಡಜೀಯವರೇ, ಬಂಗಾರಪ್ಪಜೀಯವರ ಒಡನಾಡಿಗಳಾದ ಹಿರಿಯರು, ನನ್ನ ತಂದೆ ಸಮಾನರಾದ ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪಾಜೀಯವರೇ,ನನ್ನ ಅಣ್ಣನ ಸಮಾನರಾದ ಕರ್ನಾಟಕದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಹೆಚ್.ಡಿ. ಕುಮಾರಸ್ವಾಮಿ ಯವರೇ, ನನ್ನ ಅಣ್ಣನ ಸಮಾನರಾದ ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರೇ, ಹಿರಿಯರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಧನ್ಯವಾದ
ಹಿರಿಯರು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರೇ, ಕರ್ನಾಟಕ ಸರ್ಕಾರದ ಮಂತ್ರಿಗಳಾದ ಜಮೀರ್ ಅಹ್ಮದ್ ರವರೇ, ಮಾಜಿ ಸಚಿವರಾದ ಕಿಮ್ಮನೇ ರತ್ನಾಕರ್ ರವರೇ,ಮಾಜಿ ಶಾಸಕರಾದ ಬೈಂದೂರಿನ ಗೋಪಾಲ ಪೂಜಾರಿಯವರೇ, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ನನ್ನ ಅಕ್ಕನ ಸಮಾನರಾದ ಶಾರದಾ ಪೂರ್ಯನಾಯ್ಕರವರೇ, ಹಿರಿಯರಾದ ಭದ್ರಾವತಿಯ ಮಾಜಿ ಶಾಸಕರಾದ ಅಪ್ಪಾಜಿಗೌಡರವರೇ, ಶಾಸಕರಾದ ಬಿ.ಕೆ.ಸಂಗಮೇಶ್ವರರವರೇ, ಮಂಜುನಾಥ್ ಭಂಡಾರೀಯವರೇ
ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣರವರೇ, ಎಮ್.ಎಲ್.ಸಿ.ಗಳಾದ ಆರ್.ಪ್ರಸನ್ನ ಕುಮಾರ್ ರವರೇ, ಶಿವಮೊಗ್ಗದ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್ ರವರೇ, ತೀ.ನಾ.ಶ್ರೀನಿವಾಸ್ ರವರೇ, ಆರ್.ಎಂ.ಮಂಜುನಾಥಗೌಡರವರೇ, ಶಿಕಾರಿಪುರದ ಗೋಣಿ ಮಾಲತೇಶ್ ರವರೇ,ಹೆಚ್.ಟಿ. ಬಳಿಗಾರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಿಮ್ಮ ಪ್ರೀತಿ ಅಭಿಮಾನಕ್ಕೆ ಚಿರರುಣಿ
ಎಲ್ಲಾ ಜೆಡಿಎಸ್ - ಕಾಂಗ್ರೆಸ್ ಪಕ್ಷಗಳ ಹಿರಿಯರು, ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ನೆಚ್ಚಿನ ಮತದಾರರೆಲ್ಲರಿಗೂ ನನ್ನ ಮನಃಪೂರ್ವಕ ಧನ್ಯವಾದಗಳು ಎಂದು ಮಧು ಬಂಗಾರಪ್ಪ ನಿಮ್ಮ ಪ್ರೀತಿ, ಅಭಿಮಾನ, ನಂಬಿಕೆ, ವಿಶ್ವಾಸಕ್ಕೆ ನಾನೆಂದೂ ಚಿರರುಣಿ ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications