ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?
ಶಿವಮೊಗ್ಗ, ಏಪ್ರಿಲ್ 25: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಅತ್ಯಂತ ವೇಗವಾಗಿ ನಡೆಯುತ್ತಿದೆ. ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.
ಈ ಮಧ್ಯೆ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕ್ಯಾಬಿನೆಟ್ನಲ್ಲಿ ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೂ ಶಿಫಾರಸು ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಮೂಲಕ ತಣ್ಣಗಾಗಿದ್ದ 'ಹೆಸರು ಹೋರಾಟ'ಕ್ಕೆ ಮರು ಜೀವ ನೀಡಿದರು.
ಪುನರ್ ಪರಿಶೀಲನೆಗೆ ಯಡಿಯೂರಪ್ಪ ಪತ್ರ
ಈ ನಡುವೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಹೆಸರಿಡುವ ಕುರಿತ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವೆಲ್ಲದರ ಮಧ್ಯೆ ಹಲವು ಹೆಸರು ಮುನ್ನಲೆಗೆ ಬಂದಿವೆ. ಇವುಗಳ ಪೈಕಿ ಯಾವುದಾದರೂ ಒಂದು ಹೆಸರು ಇಡುವಂತೆ ಜಿಲ್ಲೆಯಲ್ಲಿ ಒತ್ತಾಯ ಕೇಳಿ ಬಂದಿವೆ.

ಯಾವೆಲ್ಲ ಹೆಸರುಗಳು ಮುನ್ನಲೆಯಲ್ಲಿವೆ?
* ಬಿ.ಎಸ್.ಯಡಿಯೂರಪ್ಪ- ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಮುಖ ಕಾರಣ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ. ಅವರು ಆಸಕ್ತಿ ವಹಿಸದೆ ಇದ್ದಿದ್ದರೆ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರಲಿಲ್ಲ ಅನ್ನುವ ಅಭಿಪ್ರಾಯವಿದೆ. ಆದ್ದರಿಂದ ಅವರ ಹಸರಿಡಬೇಕು ಎಂಬ ಒತ್ತಾಯವಿದೆ.
ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಹೆಸರು ಸೂಚಿಸಿದ್ದರು. ಆದರೆ ಈಗ ಯಡಿಯೂರಪ್ಪ ಸಿಎಂಗೆ ಪತ್ರ ಬರೆದು ಪುನರ್ ಪರಿಶೀಲನೆಗೆ ಸೂಚಿಸಿದ್ದಾರೆ. ಆದರೆ ಅಭಿಮಾನಿಗಳು ಯಡಿಯೂರಪ್ಪ ಅವರ ಹೆಸರನ್ನೇ ಇಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
* ಕುವೆಂಪು- ಕನ್ನಡಕ್ಕೆ ಮೊದಲ ಜ್ಞಾನಪೀಠ ತಂದುಕೊಟ್ಟ ಹಿರಿಮೆ. ರಾಷ್ಟ್ರಕವಿ ಬಿರುದು ಪಡೆದ ಮೊದಲಿಗರು. ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಕುವೆಂಪು ಅವರ ಹೆಸರಿಡಬೇಕು ಎಂಬ ವಾದವಿದೆ.

* ಶಾಂತವೇರಿ ಗೋಪಾಲಗೌಡ- ಸಮಾಜವಾದಿ, ಹಿರಿಯ ರಾಜಕಾರಣಿ, ಇವರ ಗರಡಿಯಲ್ಲಿ ಪಳಗಿದ ಹಲವರು ವಿಧಾನಸೌಧ ಪ್ರವೇಶಿಸಿದ್ದಾರೆ. ದೊಡ್ಡ ಸಂಖ್ಯೆಯ ಶಿಷ್ಯವೃಂದ ಮತ್ತು ಅಭಿಮಾನಿಗಳನ್ನು ಹೊಂದಿದ್ದಾರೆ. ಸರಳತೆ, ಪ್ರೌಢಿಮೆಯ ಕಾರಣದಿಂದ ಈಗಲೂ ಇವರ ಹೆಸರು ಪ್ರಚಲಿತದಲ್ಲಿದೆ. ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಶಾಂತವೇರಿ ಗೋಪಾಲಗೌಡ ಅವರ ಹೆಸರಿಡುವಂತೆ ಒತ್ತಾಯವಿದೆ.
* ಎಸ್. ಬಂಗಾರಪ್ಪ- ಮಾಜಿ ಮುಖ್ಯಮಂತ್ರಿ, ವೈವಿಧ್ಯ ರಾಜಕೀಯಕ್ಕೆ ಹೆಸರಾದವರು. ಸೋಲಿಲ್ಲದ ಸರದಾರ ಎಂಬ ಬಿರುದು ಹೊಂದಿದ್ದಾರೆ. ಹಳ್ಳಿಯಿಂದ ದಿಲ್ಲಿವರೆಗೆ ಶಿವಮೊಗ್ಗ ಜಿಲ್ಲೆಯ ಹೆಸರು ಜನಜನಿತಗೊಳಿಸಿದ ಹಿರಿಮೆ ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಲೂ ಪ್ರಾಬಲ್ಯ ಹೊಂದಿರುವ ಹೆಸರು. ಆದ್ದರಿಂದ ಬಂಗಾರಪ್ಪ ಅವರ ಹೆಸರಿಡಿ ಎಂಬ ಆಗ್ರಹವಿದೆ.
* ಅಕ್ಕಮಹಾದೇವಿ- ಕನ್ನಡದ ಮೊದಲ ಕವಯತ್ರಿ, ವಚನ ಸಾಹಿತ್ಯದ ಪ್ರಮುಖ ಹೆಸರು. ಶರಣೆ ಅಕ್ಕಮಹಾದೇವಿ ಅವರು ಶಿವಮೊಗ್ಗ ಜಿಲ್ಲೆಯವರೆ. ಶಿಕಾರಿಪುರ ತಾಲೂಕು ಉಡುತಡಿ ಅಕ್ಕನ ಹುಟ್ಟೂರು. ಅಕ್ಮಮಹಾದೇವಿ ಅವರ ಹೆಸರನ್ನೇ ಇಡುವಂತೆ ಒತ್ತಾಯವಿದೆ.
* ಕೆಳದಿ ಶಿವಪ್ಪನಾಯಕ- ಕೆಳದಿ ಸಂಸ್ಥಾನದ ಪ್ರಮುಖ ನಾಯಕರಲ್ಲಿ ಒಬ್ಬರು ಶಿವಪ್ಪನಾಯಕ. ತೆರಿಗೆ ಸುಧಾರಣೆ ಕಾರಣಕ್ಕೆ ಇವರ ಹೆಸರು ಜನಜನಿತವಾಗಿದೆ. ಕೆಳದಿ ಶಿವಪ್ಪನಾಯಕ ಅವರ ಹೆಸರನ್ನು ಇಡಬೇಕು ಎಂಬ ಆಗ್ರಹವಿದೆ.

* ಮಲೆನಾಡು ಅಥವಾ ಶಿವಮೊಗ್ಗ- ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡುವುದು ಬೇಡ. ಅದರ ಬದಲು ಶಿವಮೊಗ್ಗ ವಿಮಾನ ನಿಲ್ದಾಣ ಅಥವಾ ಮಲೆನಾಡು ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಒತ್ತಾಯವಿದೆ. ಜಿಲ್ಲೆಗೆ ಬರುವ ಪ್ರವಾಸಿಗರು ಶಿವಮೊಗ್ಗ ವಿಮಾನ ನಿಲ್ದಾಣ ಎಂದೇ ಕರೆಯುತ್ತಾರೆ. ಆದ್ದರಿಂದ ಜಿಲ್ಲೆಯ ಹೆಸರನ್ನೇ ಇಡಬೇಕು ಎಂಬ ಅಭಿಪ್ರಾಯವಿದೆ.
ಸದ್ಯ ಪ್ರಚಲಿತದಲ್ಲಿರುವ ಹೆಸರುಗಳ ಮಧ್ಯೆ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯ ಪ್ರಮುಖ ರಾಜಕಾರಣಿಗಳು, ಸಾಹಿತಿಗಳು, ಕಲಾವಿದರ ಹೆಸರುಗಳು ನಿಧಾನಕ್ಕೆ ಮುನ್ನಲೆಗೆ ಬರುತ್ತಿವೆ. ಕೇಂದ್ರ ಸರ್ಕಾರ ಯಾವ ಹೆಸರಿಗೆ ಅಂತಿಮ ಮುದ್ರೆ ಒತ್ತಲಿದೆ ಎಂಬುದು ಕುತೂಹಲ ಮೂಡಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications