ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಯಡಿಯೂರಪ್ಪ ನಿಲುವು ಬಗ್ಗೆ ಎಂ. ಬಿ. ಪಾಟೀಲ್ ಮೆಚ್ಚುಗೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 25; ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಮಾಜಿ ಸಚಿವ ಎಂ. ಬಿ. ಪಾಟೀಲ್ ಯಡಿಯೂರಪ್ಪ ನಡೆ ಸ್ವಾಗತಿಸಿದ್ದಾರೆ.

ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಎಂ. ಬಿ. ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ. ಎಸ್. ಯಡಿಯೂರಪ್ಪ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ: ಯಡಿಯೂರಪ್ಪ ಪತ್ರದಲ್ಲೇನಿದೆ? ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ: ಯಡಿಯೂರಪ್ಪ ಪತ್ರದಲ್ಲೇನಿದೆ?

ಆದರೆ ಭಾನುವಾರ ಯಡಿಯೂರಪ್ಪ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಮ್ಮ ತೀರ್ಮಾನ ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ಕೋರಿದ್ದರು.

 Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮ; ಸಿಎಂ ಘೋಷಣೆ Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮ; ಸಿಎಂ ಘೋಷಣೆ

MB Patil Appreciate Yediyurappa Letter On Shivamogga Airport Naming

ಎಂ. ಬಿ. ಪಾಟೀಲ್ ತಮ್ಮ ಫೇಸ್‌ ಬುಕ್‌ನಲ್ಲಿ ತಮ್ಮ ಹೆಸರು ಬೇಡ. ತಮಗಿಂತಲೂ ಹೆಚ್ಚಿನ ಸಾಧನೆ ಮಾಡಿದವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಿ. ಕಾಮಗಾರಿಗಳನ್ನು ಶೀಘ್ರ ಮುಗಿಸಲು ಅಗತ್ಯದ ಅನುದಾನವನ್ನು ಬಿಡುಗಡೆ ಮಾಡಿ ಎಂಬ ಅಮೂಲ್ಯ ಸಲಹೆ ನೀಡಿ ದೊಡ್ಡತನ ಮತ್ತು ಹೃದಯ ಶ್ರೀಮಂತಿಕೆ ತೋರಿದ ಹಿರಿಯರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನಡೆ ಪ್ರಶಂಸನಾರ್ಹ ಎಂದು ಹೇಳಿದ್ದಾರೆ.

Shivamogga-Tirupati Train : ಶಿವಮೊಗ್ಗ-ತಿರುಪತಿ-ಚೆನ್ನೈ ರೈಲಿಗೆ ಹಸಿರು ನಿಶಾನೆ Shivamogga-Tirupati Train : ಶಿವಮೊಗ್ಗ-ತಿರುಪತಿ-ಚೆನ್ನೈ ರೈಲಿಗೆ ಹಸಿರು ನಿಶಾನೆ

ಕಳೆದ ವಾರ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಹೆಸರು ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದರು.

Recommended Video

8 ನೇ ಪಂದ್ಯದಲ್ಲಿ ಸೋತು IPL ಟೂರ್ನಿಯಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್ | Oneindia Kannada

English summary
Former minister and Congress leader M. B. Patil appreciated the decision of B. S. Yediyurappa on the issue of naming Shivamogga airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X