ಖಾತೆ ಹಂಚಿಕೆಯಲ್ಲಿ ಆರಗ ಜ್ಞಾನೇಂದ್ರಗೆ ಒಲಿಯಿತು ಬಂಗಾರಪ್ಪ ಮಾದರಿ ಅದೃಷ್ಟ; ಏನದು ಲಕ್?
ಶಿವಮೊಗ್ಗ, ಆಗಸ್ಟ್ 07: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪರಂತೆ ನೂತನ ಸಚಿವ ಆರಗ ಜ್ಞಾನೇಂದ್ರರಿಗೂ ಅದೃಷ್ಟ ಒಲಿದು ಬಂದಿದೆ. ಇಬ್ಬರು ಕ್ಯಾಬಿನೆಟ್ ಸೇರ್ಪಡೆಯಾದ ಮೊದಲ ಬಾರಿಗೆ ಗೃಹ ಖಾತೆಯ ಜವಾಬ್ದಾರಿ ಲಭಿಸಿದೆ.
Recommended Video

ಹಲವು ಭಾರಿ ಸಚಿವ ಸ್ಥಾನ ವಂಚಿತವಾದರೂ ತಾಳ್ಮೆ ವಹಿಸಿದ್ದ ಆರಗ ಜ್ಞಾನೇಂದ್ರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಗೃಹ ಖಾತೆ ಲಭಿಸಿದೆ. ಸರ್ಕಾರದಲ್ಲಿ ಮುಖ್ಯಮಂತ್ರಿ ನಂತರದ ಅತ್ಯಂತ ಪ್ರಭಾವಿ ಖಾತೆ ಇದು. ಹಾಗಾಗಿ ಅನುಭವಿಗಳಿಗೆ ಮಾತ್ರ ಈ ಖಾತೆಯನ್ನು ನೀಡಲಾಗುತ್ತದೆ.

ಅನುಭವವೇ ಆಧಾರವಾಯಿತು
ಆರಗ ಜ್ಞಾನೇಂದ್ರ ಹಿರಿಯ ಶಾಸಕರು, ವಿಧಾನಸಭೆಯ ವಿವಿಧ ಸಮಿತಿಗಳಲ್ಲಿ ಹಲವು ಜವಾಬ್ದಾರಿ ನಿಭಾಯಿಸಿ ಅನುಭವವಿದೆ. ಇದೇ ಕಾರಣಕ್ಕೆ ಅವರಿಗೆ ಗೃಹ ಖಾತೆ ನೀಡಿರುವ ಸಾಧ್ಯತೆ ಇದೆ.
ಇನ್ನು, ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಖಾತೆಯನ್ನು ಆರಗ ಜ್ಞಾನೇಂದ್ರರಿಗೆ ನೀಡಿರುವುದು ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಸಂತಸ ಇಮ್ಮಡಿಯಾಗಿಸಿದೆ. ಬಿ.ಎಸ್. ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದರಿಂದ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಾತಿನಿಧ್ಯ ಮಾಸಿ ಹೋಗಲಿದೆ ಎಂಬ ಲೆಕ್ಕಾಚಾರಗಳು ತಲೆಕೆಳಗಾಗುವಂತೆ ಆಗಿದೆ.

ಎಸ್. ಬಂಗಾರಪ್ಪ ಹಾದಿಯಲ್ಲಿ
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ವಿಚಾರದಲ್ಲೂ ಇದೇ ರೀತಿ ಲಕ್ ಕೈ ಹಿಡಿದಿತ್ತು. ಮೊದಲ ಬಾರಿ ಸಚಿವರಾಗುತ್ತಿದ್ದಂತೆ ಬಂಗಾರಪ್ಪ ಗೃಹ ಖಾತೆಯಂತಹ ಪ್ರಭಾವಿ ಸಚಿವಾಲಯವನ್ನು ಮುನ್ನಡೆಸಿದ್ದರು.
1977ರಲ್ಲಿ ದೇವರಾಜ ಅರಸು ಸಂಪುಟದಲ್ಲಿ ಎಸ್. ಬಂಗಾರಪ್ಪ ಮೊದಲ ಬಾರಿಗೆ ಸಚಿವರಾದರು. ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಎಸ್. ಬಂಗಾರಪ್ಪರಿಗೆ ಗೃಹ ಖಾತೆ ಒಲಿದು ಬಂದಿತ್ತು. ಈಗ ಆರಗ ಜ್ಞಾನೇಂದ್ರರಿಗೂ ಮೊದಲ ಬಾರಿಗೆ ಪ್ರಭಾವಿ ಖಾತೆ ಲಭಿಸಿದೆ. ವಿಶೇಷ ಅಂದರೆ ಇಬ್ಬರೂ ಶಿವಮೊಗ್ಗ ಜಿಲ್ಲೆಯವರೇ ಆಗಿದ್ದಾರೆ.

ಇಬ್ಬರಿಗೂ ಕಡಿಮೆ ಅಧಿಕಾರವಧಿ
ಎಸ್. ಬಂಗಾರಪ್ಪ ಗೃಹ ಖಾತೆಯನ್ನು ನಿಭಾಯಿಸಲು ಅತ್ಯಂತ ಕಡಿಮೆ ಅವಧಿ ಲಭಿಸಿತ್ತು. ಒಂದು ವರ್ಷ ಮಾತ್ರ ರಾಜ್ಯದ ಹೋಂ ಮಿನಿಸ್ಟರ್ ಆಗಿದ್ದರು. ಕಾಕತಾಳೀಯ ಎಂಬಂತೆ ನೂತನ ಗೃಹ ಸಚಿವ ಆರಗ ಜ್ಞಾನೇಂದ್ರರಿಗೂ ಕಡಿಮೆ ಅಧಿಕಾರವಧಿ ಲಭಿಸಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವ ಜವಾಬ್ದಾರಿಯು ಆರಗ ಜ್ಞಾನೇಂದ್ರ ಮೇಲಿದೆ.

ಹೋಂ ಮನಿಸ್ಟರ್ ಮೊದಲ ರಿಯಾಕ್ಷನ್
ಇತ್ತ, ಪ್ರಭಾವಿ ಖಾತೆ ಲಭಿಸಿರುವ ಕುರಿತು ಆರಗ ಜ್ಞಾನೇಂದ್ರ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. "ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡುವ ಅತ್ಯಂತ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಗೃಹ ಖಾತೆಯನ್ನು ನೀಡಿರುವ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಪ್ರಮುಖ ಖಾತೆಯನ್ನು ನೀಡಿದ್ದಾರೆ. ಸಮರ್ಥವಾಗಿ ನಿಭಾಯಿಸುವ ಪ್ರಯತ್ನ ಮಾಡುತ್ತೇನೆ,'' ಎಂದು ತಿಳಿಸಿದ್ದಾರೆ.

ಆರ್ಎಸ್ಎಸ್ನಲ್ಲಿ ಬೆಳೆದಿದ್ದಕ್ಕೆ ಹೆಮ್ಮೆ ಪಡುತ್ತೇನೆ
ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ, ಶೃಂಗೇರಿ, ಕೊಪ್ಪ ಭಾಗದಲ್ಲಿ ಅತಿವೃಷ್ಟಿಯನ್ನು ವೀಕ್ಷಿಸಿದರು. "ಗೃಹ ಇಲಾಖೆ ಬಹಳ ಸೂಕ್ಷ್ಮವಾದ ಇಲಾಖೆ ಅದನ್ನು ನಾನು ನಿರ್ವಹಿಸಬಹುದು ಎಂದು ನನ್ನನ್ನು ಆಯ್ಕೆ ಮಾಡಿದ್ದಾರೆ ಅವರ ನಂಬಿಕೆ ಹುಸಿ ಆಗದ ರೀತಿಯಲ್ಲಿ ಪ್ರಯತ್ನ ಮಾಡಿ ಕೆಲಸ ಮಾಡುತ್ತೇನೆ.''
"ನನಗೆ ಸಣ್ಣ ಕಥೆ, ದೊಡ್ಡ ಕಥೆ ಎಂಬ ಭೇದಭಾವ ಇಲ್ಲ. ನನಗೆ ಇವತ್ತು ಬಹಳ ದೊಡ್ಡ ಖಾತೆಯನ್ನು ಕೊಟ್ಟಿದ್ದಾರೆ, ಖಂಡಿತವಾಗಿಯೂ ಉತ್ತಮವಾಗಿ ಕೆಲಸ ನಿರ್ವಹಿಸುವ ಮೂಲಕ ನಂಬಿಕೆ ಹುಸಿಯಾಗದಂತೆ ಕೆಲಸ ನಿರ್ವಹಿಸುತ್ತೇನೆ,'' ಎಂದರು.
"ಆರ್ಎಸ್ಎಸ್ನಲ್ಲಿ ಬೆಳೆದಿದ್ದಕ್ಕೆ ಹೆಮ್ಮೆ ಪಡುತ್ತೇನೆ ಅದು ನನಗೆ ಶಿಸ್ತನ್ನು ಕಲಿಸಿದೆ. ನನಗೆ ಒಂದು ಯೋಗ್ಯತೆಯನ್ನು ಸಹ ಕೊಟ್ಟಿದೆ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನೋಡುವ ದೃಷ್ಟಿಕೋನವನ್ನು ಕಲಿಸಿದೆ. ಆದ್ದರಿಂದಲೇ ಇವತ್ತು ಈ ಸ್ಥಾನದಲ್ಲಿ ನಿಂತಿದ್ದೇನೆ. ಎಲ್ಲಾ ಇಲಾಖೆಯಲ್ಲಿಯೂ ಸವಾಲುಗಳಿದ್ದಂತೆ ಈ ಇಲಾಖೆಯಲ್ಲಿಯೂ ಸಹ ಸವಾಲುಗಳಿವೆ, ಎಲ್ಲರ ಸಹಕಾರದಿಂದ ಎದುರಿಸುತ್ತೇನೆ,'' ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications