ಸ್ವಾತಂತ್ರ್ಯ ಹೋರಾಟಗಾರರು ಪಕ್ಷಾತೀತವಾಗಿರಬೇಕು: ಸಚಿವ ಈಶ್ವರಪ್ಪ
ಶಿವಮೊಗ್ಗ, ಫೆಬ್ರವರಿ 27: ಎಚ್.ಎಸ್.ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು, ಅವರು ಒಂದು ಪಕ್ಷದ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ, ಸ್ವಾತಂತ್ರ ಹೋರಾಟಗಾರರು ಪಕ್ಷಾತೀತವಾಗಿರಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಸವನಗೌಡ ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಹಿಂದಿನಿಂದನೂ ದೊರೆಸ್ವಾಮಿ ಅವರು ಬೆಂಬಲ ನೀಡಿಕೊಂಡೇ ಬಂದಿದ್ದಾರೆ, ಈಗ ಯತ್ನಾಳ್ ಹೇಳಿಕೆ ವಿರೋಧಿಸಿ ಕಾಂಗ್ರೆಸ್ಸಿಗರು ಪ್ರತಿಭಟನೆ ಆರಂಭಿಸಿರುವುದು ನಾಚಿಕೆಗೇಡಿನ ಸಂಗತಿ ಎಂದರು

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಅವರು, ""ಪ್ರಧಾನಿಯನ್ನು ಸಿದ್ದರಾಮಯ್ಯ ಕೊಲೆಗಡುಕ ಎಂದಾಗ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಹೊರಗಡೆ ಹಾಕಬೇಕಿತ್ತು. ಇಂಥ ಕಾಂಗ್ರೆಸ್ಸಿಗರು ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸುತ್ತಾರಂತೆ, ವಿಧಾನಸೌಧದ ಅಧಿವೇಶನ ನಡೆಯಲು ಬಿಡುವುದಿಲ್ಲ ಎನ್ನುತ್ತಿದ್ದಾರೆ ಇವರಿಗೆ ಏನು ಹೇಳಬೇಕು'' ಎಂದು ಕಿಡಿಕಾರಿದರು.
""ಅದು ಹೇಗೆ ಅಧಿವೇಶನ ನಡೆಯಲು ಬಿಡುವುದಿಲ್ಲವೋ ನಾನು ನೋಡುತ್ತೇನೆ ವಿಧಾನಸೌಧ ಅವರ ಸ್ವಂತ ಆಸ್ತಿಯಲ್ಲ, ಕಾಂಗ್ರೆಸ್ಸಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಧಾನಸೌಧವಿಲ್ಲ'' ಎಂದು ತಿಳಿಸಿದರು.
"ಪಾಕಿಸ್ತಾನ ಜಿಂದಾಬಾದ್' ಎಂದವರ ಬಗ್ಗೆ ಖಂಡನಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯ ವಿರೋಧ ಮಾಡುತ್ತಾರೆ, ಯತ್ನಾಳ್ ಹೇಳಿಕೆಗೆ ಧರಣಿ ಕೂರುತ್ತೀರಿ, ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಗ್ಗೆ ಒಂದು ಖಂಡನಾ ಹೇಳಿಕೆ ನೀಡುತ್ತೀರಾ'' ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.
""ರಾಜ್ಯದಲ್ಲಿ ಕಾಂಗ್ರೆಸ್ ನಲ್ಲಿ ಎಷ್ಟು ಜನರಿದ್ದಾರೋ ಗೊತ್ತಿಲ್ಲ, ಇನ್ನೂ ನಿಮಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಿಕೊಳ್ಳಲು ಆಗಿಲ್ಲ ಇಂಥ ಕಾಂಗ್ರೆಸ್ ಯತ್ನಾಳ್ ವಿರುದ್ಧ ಧರಣಿ ಕೂರುತ್ತದೆಯಂತೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ನಿರ್ನಾಮವಾಗುವುದಕ್ಕೆ ಮೂಲಕಾರಣ, ದೊರೆಸ್ವಾಮಿ ಅಂತವರು. ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಧರಣಿ ಕೂತಿದ್ದರೆ ನಾವೂ ಅವರಿಗೆ ಬೆಂಬಲ ನೀಡುತ್ತಿದ್ದೆವು.
ಅಮೂಲ್ಯ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದೇವೆ. ದೊರೆಸ್ವಾಮಿ ಅವರು ಹಿರಿತನಕ್ಕೆ ತಕ್ಕಂತೆ ಮಾರ್ಗದರ್ಶನ ಮಾಡಿದರೆ ನಾವು ಅವರೊಂದಿಗೆ ಇರುತ್ತೇವೆ'' ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications