ತುಂಬಿದ ಗಾಜನೂರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ, ಜೂನ್ 23: ರಾಜ್ಯದ ಅತೀ ಚಿಕ್ಕ ಜಲಾಶಯ ಹಾಗೂ ಮುಂಗಾರು ಆರಂಭವಾಗುತ್ತಿದ್ದಂತೆ ಮೊದಲು ತುಂಬಿಕೊಳ್ಳುವ ಗಾಜನೂರು ತುಂಗಾ ಜಲಾಶಯಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ದಂಪತಿ ಬುಧವಾರ ಬಾಗಿನ ಸಮರ್ಪಣೆ ಮಾಡಿದರು.
ಬುಧವಾರ ಮುಂಜಾನೆ ತೀರ್ಥಹಳ್ಳಿ ರಸ್ತೆಯ ಗಾಜನೂರು ಜಲಾಶಯಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ ದಂಪತಿಗಳು ಪುರೋಹಿತರ ನೇತೃತ್ವದಲ್ಲಿ ಪೂಜೆ ಸಲ್ಲಿಸಿದರು. ನಂತರ ಶಾಸ್ತ್ರೋಕ್ತವಾಗಿ ಬಾಗಿನ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, "ರಾಜ್ಯದಲ್ಲಿ ನಿರೀಕ್ಷೆ ಮೀರಿ ಮಳೆ ಬರುತ್ತಿರುವುದು ಜನರಿಗೆ ಹರ್ಷ ತಂದಿದೆ. ಈ ಸಂದರ್ಭದಲ್ಲಿ ನಾಟಿ ಮಾಡುವವರು, ಹೊಲ ಅಣಿಗೊಳಿಸುವವರೆಲ್ಲರಿಗೂ ಸಂತಸ ಮೂಡಿಸಿದೆ. ಕೊರೊನಾ ಸಂದರ್ಭದಲ್ಲಿ ಆತಂಕಕ್ಕೀಡಾಗಿದ್ದ ರೈತರು ಸಂಕಷ್ಟದಿಂದ ಹೊರಬರುತ್ತಿದ್ದಂತೆ ವರ್ಷಧಾರೆ ಖುಷಿ ತಂದಿದೆ. ತುಂಗಾ ಅಣೆಕಟ್ಟು ಈ ವರ್ಷ ಈಗಾಗಲೇ ಎರಡು ಬಾರಿ ತುಂಬಿದೆ. ಇದೇ ವೇಳೆ ಕೊರೊನಾ ಕೂಡ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕೊರೊನಾದಂತೆ ಅತಿವೃಷ್ಟಿಯಾದಾಗಲೂ ಸಹ ಸರ್ಕಾರ ಉತ್ತಮವಾಗಿ ನಿಭಾಯಿಸಿದೆ,'' ಎಂದರು.

"ಈ ಸಂಕಷ್ಟಗಳಿಂದ ಹೊರಬಂದು ಕೊರೊನಾ ಸೋಂಕು ಓಡಿಸುವ ನಿಟ್ಟಿನಲ್ಲಿಯೂ ಗಮನಾರ್ಹ ಸಾಧನೆ ಮಾಡಿ ದೇಶದಲ್ಲೇ ನಮ್ಮ ಸರ್ಕಾರ ಮೆಚ್ಚುಗೆ ಪಡೆದಿದೆ. ಇದೇ ಸಂದರ್ಭದಲ್ಲಿ ಕೊರೊನಾ ಲಸಿಕೆಯಲ್ಲಿ ಪ್ರಪಂಚದಲ್ಲೇ ಭಾರತ ಮುಂಚೂಣಿಯಲ್ಲಿದ್ದು, ನಮ್ಮ ರಾಜ್ಯದ ಕೊಡುಗೆಯೂ ಕೂಡ ಅನನ್ಯವಾಗಿದೆ. ಕೊರೊನಾ ತೊಲಗಲಿ ಹಾಗೂ ಜನ ಸಮೃದ್ಧಿಯಿಂದ ಇರಲೆಂದು ನಾವೆಲ್ಲ ಇಲ್ಲಿ ಪೂಜೆ ಮಾಡಿಸಲು ಬಂದಿದ್ದೇವೆ,'' ಎಂದು ಈಶ್ವರಪ್ಪ ಹೇಳಿದರು.

ತುಂಗಾ ನದಿಯಲ್ಲಿ ಒಳಹರಿವು ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದು, ಗೇಟ್ಗಳನ್ನು ಬಂದ್ ಮಾಡಲಾಗಿದೆ. ವಿದ್ಯುತ್ ಘಟಕಗಳಿಂದ ನೀರು ಹರಿ ಬಿಡಲಾಗುತ್ತಿದೆ. ಸದ್ಯ ಜಲಾಶಯದಿಂದ 6759 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್ ಸೇರಿದಂತೆ ಹಲವರು ಇದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications