ಶಿವಮೊಗ್ಗ: ಇಂದಿನ ತೀರ್ಪು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿ
ಶಿವಮೊಗ್ಗ, ಸೆಪ್ಟೆಂಬರ್ 30: ಅಯೋಧ್ಯೆಯ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ 32 ಜನರನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಇದು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾವುದೋ ದೇಶದಿಂದ ಬಂದ ಬಾಬರ್ ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣವಾದಾಗ ಗುಲಾಮರ ಸಂಕೇತದಂತೆ ನಮ್ಮನ್ನು ಕೆಣಕುತ್ತಿತ್ತು. ಆದರೆ ಈ ತೀರ್ಪು ನೀನು ಗುಲಾಮನಲ್ಲವೆಂದು ನೀಡಿದೆ ಎಂದರು.
ಬಾಬರಿ ಮಸೀದಿ ಪ್ರಕರಣದ ಹೋರಾಟದಲ್ಲಿದ್ದ 32 ಜನರಿಗೆ ಕೋರ್ಟ್ ಖುಲಾಸೆ ಮಾಡಿರುವುದು ರಾಷ್ಟ್ರೀಯವಾದಿಗಳಿಗೆ ಸಂತಸದ ದಿನವಾಗಿದೆ. ಸ್ವತಂತ್ರ ಭಾರತದಲ್ಲಿ ನಮ್ಮ ಶ್ರದ್ಧಾ ಮಂದಿರಗಳ ಪರ ಹೋರಾಟ ಮಾಡಲು ಇಂದಿನ ತೀರ್ಪು ಸ್ಫೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಮಸೀದಿ ಕೆಡವಿ ರಾಮಮಂದಿರ ಕಟ್ಟಬೇಕು ಎಂಬುದು ರಾಷ್ಟ್ರೀಯವಾದಿಗಳ ತೀರ್ಮಾನವಾಗಿತ್ತು. ಈ ತೀರ್ಪು ಕೇವಲ ಅಯೋಧ್ಯೆಗೆ ಮಾತ್ರ ಸೀಮಿತವಾಗಿಲ್ಲ. ಮಥುರಾದಲ್ಲಿಯೂ ಶ್ರೀಕೃಷ್ಣನ ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ.
ಇಲ್ಲಿಯೂ ಶ್ರೀಕೃಷ್ಣನ ದೇವಾಲಯ ನಿರ್ಮಾಣಕ್ಕೆ ಈ ತೀರ್ಪು ಪ್ರೇರಣೆಯಾಗಿದೆ. ಅಡ್ವಾಣಿ ಅವರಿಗೆ ಶಿಕ್ಷೆಯಾಗಿದ್ದರೆ ಈ ವಯಸ್ಸಿನಲ್ಲಿ ಏನು ಕಥೆ? ಎಂದು ಕೆಲವರು ಹೇಳುತ್ತಿದ್ದರು ಎಂದರು.
ಆದರೆ ಅವರು ರಾಮನಿಗಾಗಿ ಶಿಕ್ಷೆಗೆ ಸಿದ್ಧರಾಗಿದ್ದರು ಎಂದರು. ಮಥುರಾದಲ್ಲಿಯೂ ಕರಸೇವೆ ಮಾಡಲಾಗುವುದಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಥುರಾದಲ್ಲಿ ಕರ ಸೇವೆ ಮಾಡಲು ಕೋರ್ಟ್ ಬಿಡುವುದಿಲ್ಲ ಎಂಬ ಭಾವನೆ ನನಗೆ ಇದೆ ಎಂದು ಉತ್ತರಿಸಿದರು.
ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಸತೀಶ್ ಪ್ರಧಾನ್ ಸೇರಿ 32 ಆರೋಪಿಗಳನ್ನು ನಿರ್ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications