ಶಿವಮೊಗ್ಗ: ಇಂದಿನ ತೀರ್ಪು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿ
ಶಿವಮೊಗ್ಗ, ಸೆಪ್ಟೆಂಬರ್ 30: ಅಯೋಧ್ಯೆಯ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ 32 ಜನರನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಇದು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾವುದೋ ದೇಶದಿಂದ ಬಂದ ಬಾಬರ್ ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣವಾದಾಗ ಗುಲಾಮರ ಸಂಕೇತದಂತೆ ನಮ್ಮನ್ನು ಕೆಣಕುತ್ತಿತ್ತು. ಆದರೆ ಈ ತೀರ್ಪು ನೀನು ಗುಲಾಮನಲ್ಲವೆಂದು ನೀಡಿದೆ ಎಂದರು.
ಬಾಬರಿ ಮಸೀದಿ ಪ್ರಕರಣದ ಹೋರಾಟದಲ್ಲಿದ್ದ 32 ಜನರಿಗೆ ಕೋರ್ಟ್ ಖುಲಾಸೆ ಮಾಡಿರುವುದು ರಾಷ್ಟ್ರೀಯವಾದಿಗಳಿಗೆ ಸಂತಸದ ದಿನವಾಗಿದೆ. ಸ್ವತಂತ್ರ ಭಾರತದಲ್ಲಿ ನಮ್ಮ ಶ್ರದ್ಧಾ ಮಂದಿರಗಳ ಪರ ಹೋರಾಟ ಮಾಡಲು ಇಂದಿನ ತೀರ್ಪು ಸ್ಫೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಮಸೀದಿ ಕೆಡವಿ ರಾಮಮಂದಿರ ಕಟ್ಟಬೇಕು ಎಂಬುದು ರಾಷ್ಟ್ರೀಯವಾದಿಗಳ ತೀರ್ಮಾನವಾಗಿತ್ತು. ಈ ತೀರ್ಪು ಕೇವಲ ಅಯೋಧ್ಯೆಗೆ ಮಾತ್ರ ಸೀಮಿತವಾಗಿಲ್ಲ. ಮಥುರಾದಲ್ಲಿಯೂ ಶ್ರೀಕೃಷ್ಣನ ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ.
ಇಲ್ಲಿಯೂ ಶ್ರೀಕೃಷ್ಣನ ದೇವಾಲಯ ನಿರ್ಮಾಣಕ್ಕೆ ಈ ತೀರ್ಪು ಪ್ರೇರಣೆಯಾಗಿದೆ. ಅಡ್ವಾಣಿ ಅವರಿಗೆ ಶಿಕ್ಷೆಯಾಗಿದ್ದರೆ ಈ ವಯಸ್ಸಿನಲ್ಲಿ ಏನು ಕಥೆ? ಎಂದು ಕೆಲವರು ಹೇಳುತ್ತಿದ್ದರು ಎಂದರು.
ಆದರೆ ಅವರು ರಾಮನಿಗಾಗಿ ಶಿಕ್ಷೆಗೆ ಸಿದ್ಧರಾಗಿದ್ದರು ಎಂದರು. ಮಥುರಾದಲ್ಲಿಯೂ ಕರಸೇವೆ ಮಾಡಲಾಗುವುದಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಥುರಾದಲ್ಲಿ ಕರ ಸೇವೆ ಮಾಡಲು ಕೋರ್ಟ್ ಬಿಡುವುದಿಲ್ಲ ಎಂಬ ಭಾವನೆ ನನಗೆ ಇದೆ ಎಂದು ಉತ್ತರಿಸಿದರು.
ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಸತೀಶ್ ಪ್ರಧಾನ್ ಸೇರಿ 32 ಆರೋಪಿಗಳನ್ನು ನಿರ್ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications