Get Updates
Get notified of breaking news, exclusive insights, and must-see stories!

Breaking: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಶಿವಮೊಗ್ಗ, ಏಪ್ರಿಲ್ 14: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಆಗ್ರಹ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಗುರುವಾರ ಸಂಜೆ ಶಿವಮೊಗ್ಗದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ, ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ಶುಕ್ರವಾರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ ಎಂದು ಪ್ರಕಟಿಸಿದರು.

ಇನ್ನು ಮೂರು ದಿನ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದ ಸಚಿವ ಈಶ್ವರಪ್ಪ, ಇಂದು ಸಂಜೆ ದಿಢೀರ್ ಪತ್ರಿಕಾಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲ ಮೂಡಿಸಿತ್ತು. ಬೆಳಗ್ಗೆಯಿಂದಲೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

Recommended Video

      ಪ್ರತಿಭಟನೆ ಮಾಡೋಕೆ ಹೋದ ಕಾಂಗ್ರೆಸ್ ನಾಯಕರ ಕಥೆ ನೋಡಿ | Oneindia Kannada

      ಬುಧವಾರ ಶಿವಮೊಗ್ಗದಲ್ಲಿ ಮಾತನಾಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು, ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು.

      Minister KS Eshwarappa Will Held Emergency Press Conference In Shivamogga On Thursday at 6 pm

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+