ತೀರ್ಥಹಳ್ಳಿ; ಮಧ್ಯರಾತ್ರಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ ದುಷ್ಕರ್ಮಿಗಳು
ಶಿವಮೊಗ್ಗ, ಅಕ್ಟೋಬರ್ 13: ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಮೇಗರವಳ್ಳಿಯಲ್ಲಿ ನಿನ್ನೆ, ಅ.12ರ ಮಧ್ಯರಾತ್ರಿ ಇನೋವಾ ಕಾರಿನಲ್ಲಿ ಬಂದ ಆರೇಳು ಮಂದಿ ಮನೆಯೊಂದಕ್ಕೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿ ಕಳ್ಳತನಕ್ಕೆ ಯತ್ನಿಸಿರುವುದಾಗಿ ತಿಳಿದುಬಂದಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗರವಳ್ಳಿ ಗ್ರಾಮದಲ್ಲಿ ಗಣೇಶ ಹೆಗಡೆ ಎಂಬುವರ ಮನೆಗೆ ಮಧ್ಯರಾತ್ರಿ 12.30ರ ಸುಮಾರಿಗೆ ಆರೇಳು ಮಂದಿ ನುಗ್ಗಿದ್ದು, ದರೋಡೆಗೆ ಯತ್ನಿಸಿದ್ದಾರೆ. ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಇಬ್ಬರಿಗೆ ಗಾಯವಾಗಿದೆ.
ಮನೆಯವರ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಕೋವಿ ತಂದು ಹೆದರಿಸಿ ಕೂಗಾಡಿದ್ದರಿಂದ ಅಲ್ಲಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಆಗುಂಬೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಳ್ಳರ ಪತ್ತೆಗೆ ಮುಂದಾಗಿದ್ದಾರೆ. ಆದರೆ ಪೊಲೀಸ್ ಇಲಾಖೆಯ ವೈಫಲ್ಯವೇ ಪದೇ ಪದೇ ಇಂತಹ ಘಟನೆಗಳು ನಡೆಯಲು ಕಾರಣ ಎಂಬ ಆರೋಪವೂ ಕೇಳಿ ಬಂದಿದೆ.

ಮೇಗರವಳ್ಳಿ ಸೇರಿದಂತೆ ತೀರ್ಥಹಳ್ಳಿ ಕ್ಷೇತ್ರದ ಹಲವಡೆ ಕಳ್ಳತನ, ದರೋಡೆ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದು ಆತಂಕ ತಂದಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಘಟನೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಮೇಗರವಳ್ಳಿ ಘಟನೆ ತಿಳಿದ ತಕ್ಷಣವೇ ಜಿಲ್ಲಾ ರಕ್ಷಣಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಘಟನೆ ಕುರಿತು ಚರ್ಚಿಸಿದ್ದಾರೆ.
ಮಲೆನಾಡಿನಲ್ಲಿ ಒಂದೊಂದೇ ಮನೆಗಳು ಇವೆ. ಇಂತಹ ಘಟನೆಗಳಿಂದ ಜನರಲ್ಲಿ ಭಯ ಹೆಚ್ಚಿದೆ. ಜೊತೆಗೆ ಪೊಲೀಸ್ ಇಲಾಖೆ ಮೇಲೆ ನಂಬಿಕೆ ಕಡಿಮೆಯಾಗಿದೆ. ಎಲ್ಲಾ ಪ್ರಕರಣದಲ್ಲಿ ಅಪರಾಧಿಗಳನ್ನು ಹಿಡಿದು ಜನತೆಗೆ ಧೈರ್ಯ ತುಂಬಬೇಕು. ವಿಶೇಷ ಪೊಲೀಸ್ ಕಾರ್ಯಪಡೆ ರಚಿಸಲು ಗೃಹ ಮಂತ್ರಿಗಳ ಜತೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ದರೋಡೆ ಯತ್ನ ನಡೆದ ಮನೆಗೆ ಇಂದು ಬೆಳಿಗ್ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications