ಮಳೆಯ ಆರ್ಭಟ: ಆಗುಂಬೆ ಘಾಟ್ನಲ್ಲಿ ಗುಡ್ಡ ಕುಸಿತ
ಶಿವಮೊಗ್ಗ, ಜುಲೈ 14: ಮಲೆನಾಡಿನಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆಯ ಪರಿಣಾಮ ಕರಾವಳಿ-ಮಲೆನಾಡು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.
ಭಾನುವಾರ ಬೆಳಗ್ಗೆ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆಗುಂಬೆ ಘಾಟ್ ರಸ್ತೆಯ 4ನೇ ತಿರುವಿನಲ್ಲಿ ಗುಡ್ಡ ಕುಸಿತಗೊಂಡು ರಸ್ತೆ ಮೇಲೆ ಗುಡ್ಡದ ಮಣ್ಣು, ಮರ-ಗಿಡಗಳು ಬಿದ್ದಿದೆ. ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಇದರಿಂದಾಗಿ ವಾಹನಗಳ ಸಂಚಾರ ತಡವಾಗುತ್ತಿದೆ.
ಗುಡ್ಡದ ಮಣ್ಣು ಇನ್ನಷ್ಟು ಕುಸಿದು ರಸ್ತೆಯ ಮೇಲೆ ಬಿದ್ದರೆ ಆಗುಂಬೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಪ್ರಮುಖ ಹೆದ್ದಾರಿ ಆಗುಂಬೆ ಘಾಟ್ ಮೂಲಕ ಹಾದು ಹೋಗುತ್ತದೆ.
ಭಾರಿ ಮಳೆಯ ಕಾರಣ ಆಗಂಬೆ ಘಾಟ್ನಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದಾಗಿ ಆತಂಕದಲ್ಲಿ ವಾಹನ ಚಾಲನೆ ಮಾಡಬೇಕಾಗಿದೆ. ಶಿವಮೊಗ್ಗ ಮತ್ತು ಮಂಗಳೂರು ನಡುವಿನ ಲಘು ವಾಹನಗಳು ಆಗುಂಬೆ ಮೂಲಕ ಸಾಗುತ್ತವೆ.
ಭಾರೀ ವಾಹನಗಳ ಸಂಚಾರ ನಿಷೇಧ: ಪ್ರತಿ ವರ್ಷ ಮುಂಗಾರು ಮಳೆಯ ಸುರಿಯುವ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತದೆ. ಆದ್ದರಿಂದ ಶಿವಮೊಗ್ಗ-ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸುರಕ್ಷತೆ ದೃಷ್ಟಿಯಿಂದ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗುತ್ತದೆ.
ಈ ಬಾರಿಯೂ ಶಿವಮೊಗ್ಗ ಜಿಲ್ಲಾಡಳಿತ ಈ ಕುರಿತು ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜೂನ್ 27 ರಿಂದ ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬದಲಿ ಮಾರ್ಗವನ್ನು ಸಹ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟ್ನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಭಾರೀ ವಾಹನ ಸಂಚಾರ ನಿಷೇಧಿಸಿದೆ. ಆದ್ದರಿಂದ ಲಘು ವಾಹನಗಳು ಮಾತ್ರ ಈಗ ಸಂಚಾರ ನಡೆಸುತ್ತಿವೆ.
ರಾಷ್ಟ್ರೀಯ ಹೆದ್ದಾರಿ ವಿಭಾಗ, ಶಿವಮೊಗ್ಗ ಕಾರ್ಯಪಾಲಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಶಿವಮೊಗ್ಗ ಎಸ್ಪಿ ಅವರು ಸಹ ವರದಿ ಸಲ್ಲಿಕೆ ಮಾಡಿ, ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸಲು ಅನುವು ಮಾಡಿಕೊಡಬಹುದೆಂದು ವರದಿಯಲ್ಲಿ ಉಲ್ಲೇಖ ಮಾಡಿದ್ದರು.
ಸದ್ಯ ಭಾರೀ ವಾಹನಗಳಿಗೆ ಆಗುಂಬೆಯಲ್ಲಿ ಪ್ರವೇಶ ನಿಷೇಧಿಸಿದ್ದು, ತೀರ್ಥಹಳ್ಳಿ -ಉಡುಪಿಗೆ ಸಂಚಾರ ನಡೆಸುವ ವಾಹನಗಳು ತೀರ್ಥಹಳ್ಳಿ- ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ ಮಾರ್ಗವಾಗಿ ಸಂಚಾರ ನಡೆಸಬಹುದು. ಉಡುಪಿ-ತೀರ್ಥಹಳ್ಳಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮೂಲಕ ಸಂಚಾರ ನಡೆಸಬಹುದು ಎಂದು ಪರ್ಯಾಯ ಮಾರ್ಗವನ್ನು ನೀಡಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications