ಮುಂಗಾರು ಶುರು; ತುಂಗಾ ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ
ಶಿವಮೊಗ್ಗ, ಜೂನ್ 9: ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಜಲಾಶಯದ ಗೇಟುಗಳಿಂದ ತುಂಗಾ ನದಿಗೆ ಯಾವುದೇ ಸಂದರ್ಭದಲ್ಲೂ ನೀರು ಹರಿಸಬಹುದಾಗಿದೆ.
ಹೀಗಾಗಿ ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ.
ನೈರುತ್ಯ ಮುಂಗಾರು: ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ
ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಸುರಕ್ಷತಾ ದೃಷ್ಟಿಯಿಂದ ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
Comments
English summary
With monsoon rains, inflow increased to Tunga reservoir. so Villagers living in the Tunga basin have been warned,