ಬೆಂಗಳೂರಿಗೆ ಲಿಂಗನಮಕ್ಕಿ ನೀರು ಕೊಂಡೊಯ್ಯಲು ಬಿಡೊಲ್ಲ: ರಾಘವೇಂದ್ರ
ಶಿವಮೊಗ್ಗ, ಜೂನ್ 22: ಬೆಂಗಳೂರಿಗರ ಕುಡಿಯುವ ನೀರಿನ ಸಮಸ್ಯೆ ತಣಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ತರುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಸುಮಾರು 300 ಕಿ.ಮೀ. ದೂರದ ಲಿಂಗನಮಕ್ಕಿಯಿಂದ ಅಂದಾಜು 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ನೀರು ತರಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ಡಿಪಿಆರ್ ಸಿದ್ಧಪಡಿಸುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಲೆನಾಡಿನ ಭಾಗಗಳಲ್ಲಿಯೇ ಸರಿಯಾಗಿ ಮಳೆಯಾಗುತ್ತಿಲ್ಲ. ಅಲ್ಲದೆ, ಇಲ್ಲಿನ ಅನೇಕ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇದೆ. ರೈತರ ಬೆಳೆಗಳಿಗೆ ನೀರು ಸಾಲುತ್ತಿಲ್ಲ. ಹೀಗಿರುವಾಗ ಬೆಳೆಯುತ್ತಿರುವ ದೂರ ಬೆಂಗಳೂರಿಗೆ ಏಕೆ ನೀರು ಕೊಡಬೇಕು ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ಉದ್ಧಾರವಾದರೆ ರಾಜ್ಯವೇ ಉದ್ಧಾರವಾದಂತೆ ಎಂದು ಸರ್ಕಾರ ಭಾವಿಸಿರುವಂತಿದೆ ಎಂಬುದಾಗಿ ಸಂಸದ ಬಿವೈ ರಾಘವೇಂದ್ರ ಯೋಜನೆ ವಿರುದ್ಧ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ವೇಳೆ ಜಮೀನು ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ನೀಡಿಲ್ಲ. ಈಗ ಇಲ್ಲಿಂದ ನೀರು ಕೊಂಡೊಯ್ಯಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಾದರೂ ನೀರು ಸಂಗ್ರಹಿಸುವ ವ್ಯವಸ್ಥೆಯಿಲ್ಲ. ಅಲ್ಲಿ ಮಳೆ ನೀರು ಕೊಯ್ಲು ಮತ್ತು ಕೆರೆ ಒತ್ತುವರಿ ತೆರವು ಮಾಡುವುದರತ್ತ ಸರ್ಕಾರ ಗಮನ ಹರಿಸಿಲ್ಲ. ಈ ಕ್ರಮಗಳನ್ನು ತೆಗೆದುಕೊಂಡರೆ ಅಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.
ಲಿಂಗನಮಕ್ಕಿ ಜಲಾಶಯ ನಿರ್ಮಿಸಿದ್ದು ವಿದ್ಯುತ್ ಉತ್ಪಾದನೆಯ ಉದ್ದೇಶದಿಂದ. ಇಲ್ಲಿಂದ ಬೆಂಗಳೂರಿಗೆ ಕುಡಿಯುವ ನೀರು ಸಾಗಿಸಿದರೆ ವಿದ್ಯುತ್ ಉತ್ಪಾದನೆ ಮಾಡುವುದು ಹೇಗೆ? ಬೆಂಗಳೂರಿಗೆ ನೀರು ಪಂಪ್ ಮಾಡಿ ಕಳುಹಿಸಲೂ ವಿದ್ಯುತ್ ಇರುವುದಿಲ್ಲ. ಈ ಯೋಜನೆಯಿಂದ ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶ ಉಂಟಾಗಲಿದೆ. ಹೀಗಾಗಿ ಈ ಯೋಜನೆಗೆ ತಮ್ಮ ವಿರೋಧವಿದೆ ಎಂದಿದ್ದಾರೆ.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರಗಾಲದ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications