"ಕುಮಾರಸ್ವಾಮಿ ಈಗ ವಿಲವಿಲ ಒದ್ದಾಡುತ್ತಿದ್ದಾರೆ"
ಶಿವಮೊಗ್ಗ, ಫೆಬ್ರವರಿ 09: "ಅಧಿಕಾರ ಕಳೆದುಕೊಂಡ ಮೇಲೆ ಕುಮಾರಸ್ವಾಮಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಅಧಿಕಾರ ಹೋಗಿದ್ದಕ್ಕೆ ಕುಮಾರಸ್ವಾಮಿ ನೀರಿನಿಂದ ಹೊರತೆಗೆದ ಮೀನಿನಂತೆ ವಿಲವಿಲ ಒದ್ದಾಡುತ್ತಿದ್ದಾರೆ. ಅವರ ಮನಸ್ಥಿತಿ ಸರಿಯಿಲ್ಲ, ಹೀಗಾಗಿ ಹುಚ್ಚು ಹುಚ್ಚಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ" ಎಂದು, ಬಿಜೆಪಿ ಸರ್ಕಾರ ಹೆಚ್ಚು ದಿನ ಇರಲ್ಲ ಎಂಬ ಎಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು.
ಜಿಲ್ಲೆಯ ಶಿಕಾರಿಪುರ ಪಟ್ಟಣ ಸಿಎಂ ಬಿ.ಎಸ್ ವೈ ಸ್ವಗೃಹಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ, ಎಂ.ಪಿ. ರೇಣುಕಾಚಾರ್ಯ, "ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರೇ ಹಗಲು ಕನಸು ಕಾಣಬೇಡಿ. ಸರ್ಕಾರ ಪತನ ಆಗಲ್ಲ. ಯಡಿಯೂರಪ್ಪ ಕಲ್ಲುಬಂಡೆಯ ರೀತಿ. ಮುಂದಿನ ಮೂರೂವರೆ ವರ್ಷ ಇದೇ ಸರ್ಕಾರವಿರುತ್ತದೆ ಮಾತ್ರವಲ್ಲ, 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ" ಎಂದರು.

"ನಾನು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಯಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾರಣ. ನಾನು ಸಚಿವ ಸ್ಥಾನ ಆಕಾಂಕ್ಷಿ ಅಂತ ನಿಮ್ಮ ಮುಂದೆ ಹೇಳಿದರೆ ಪ್ರಯೋಜನ ಇಲ್ಲ. ಬಿಎಸ್ ವೈ ನಮ್ಮ ತಂದೆ ಇದ್ದಂತೆ" ಎಂದರು. ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಬೇಕು ಎಂಬುದು ಜಿಲ್ಲೆಯ ಜನರ ಆಕಾಂಕ್ಷೆ. ಇದಕ್ಕೆ ನಾನು ಯಾವುದೇ ಒತ್ತಡ, ಬೇಡಿಕೆ ಇಟ್ಟಿಲ್ಲ. 15 ಜನ ಶಾಸಕರು ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. 10 ಜನಕ್ಕೆ ಈಗಾಗಲೇ ಸಚಿವ ಸ್ಥಾನ ನೀಡಲಾಗಿದೆ. ಸಿಎಂ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾವೆಲ್ಲ ಬದ್ಧ" ಎಂದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications