ತಂದೆ-ಮಗನ ಜಗಳದಲ್ಲಿ ಪ್ರಾಣಬಿಟ್ಟಿದ್ದು 5 ವರ್ಷದ ಕಂದಮ್ಮ!
ಶಿವಮೊಗ್ಗ, ಡಿಸೆಂಬರ್.15: ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಕೇಳಿದ್ದೀರಿ. ಆದರೆ, ಶಿವಮೊಗ್ಗದಲ್ಲಿ ತಂದೆ-ಮಗನ ಜಗಳದಲ್ಲಿ 5 ವರ್ಷದ ಪುಟ್ಟ ಕಂದಮ್ಮ ಪ್ರಾಣ ಬಿಡುವಂತಾಗಿದೆ.
ಅಚ್ಚರಿ ಅನಿಸಿದರೂ ಇದು ಸತ್ಯ. ಮಾನಸಿಕ ಅಸ್ವಸ್ಥನಾದ ಯುವಕನ ಸಿಟ್ಟಿಗೆ ಐದು ವರ್ಷದ ಬಾಲಕಿ ರಜನಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಗಾಡಿಕೊಪ್ಪದಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥನಾಗಿದ್ದ ಸಂತೋಷ್ (23) ಬೆಳಿಗ್ಗೆ ತನ್ನ ತಂದೆ ಜಯಣ್ಣ ಜೊತೆ ಜಗಳವಾಡಿದ್ದಾರೆ. ನಂತರ ಆ ಕೋಪವನ್ನು ಮನೆಯಲ್ಲಿದ್ದ ತಂಗಿಯ ಮಗಳ ಮೇಲೆ ತೋರಿದ್ದಾರೆ. ಐದು ವರ್ಷದ ಪುಟ್ಟ ಕಂದಮ್ಮ ರಜನಿಗೆ ಚಾಕುವಿನಿಂದ ಇರಿದಿದ್ದಾನೆ.

ಬೆಳಿಗ್ಗೆ 7 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಬಾಲಕಿ ರಜನಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಜನಿ ಪ್ರಾಣ ಬಿಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಕೋಪದ ಕೈಗೆ ಬುದ್ಧಿ ಕೊಟ್ಟಿದ್ದಕ್ಕೆ ಪ್ರಾಣ ಬಲಿ:
ಕೋಪದ ಕೈಗೆ ಬುದ್ಧಿ ಕೊಟ್ಟ ತಪ್ಪಿಗೆ ಪುಟ್ಟ ಮಗುವೊಂದು ಬಲಿಯಾಗುವಂತಾಗಿದೆ. ಅಷ್ಟಕ್ಕೂ ಇದೇನು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಂತೂ ಅಲ್ಲವೇ ಅಲ್ಲ. ಗಾಡಿಕೊಪ್ಪದ ಬಸವೇಶ್ವರ ದೇವಸ್ಥಾನದ ಬಳಿ ಎಳನೀರು ಮಾರುತ್ತಿದ್ದ ಸಂತೋಶ್ ಮಾನಸಿಕ ಅಸ್ವಸ್ಥನಾಗಿದ್ದ. ವರ್ಷದ ಹಿಂದೆಯಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತಾದರೂ, ಸಂತೋಷ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡಿರಲಿಲ್ಲ. ಮೊದಲೇ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಸಂತೋಷ್, ಇಂದು ತಂದೆ ಮೇಲಿನ ಕೋಪಕ್ಕೆ ತಂಗಿ ಮಗಳು 5 ವರ್ಷದ ರಜನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications