ಶಿವಮೊಗ್ಗ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ:ಬಿ.ವೈ.ರಾಘವೇಂದ್ರ ವಿಶ್ವಾಸ
ಶಿವಮೊಗ್ಗ, ಏಪ್ರಿಲ್ 23:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗುತ್ತಿದ್ದು, ನನ್ನ ಗೆಲುವು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಷ್ಟ್ರಾಭಿಮಾನದ ಹಿನ್ನೆಲೆಯಲ್ಲಿ ಮತದಾನವಾಗುತ್ತಿದ್ದು, ಪ್ರತಿಯೊಬ್ಬ ಮತದಾರನು ರಾಷ್ಟ್ರ ರಕ್ಷಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಗೆಲುವು ಹೆಚ್ಚಿನ ಮತಗಳ ಅಂತರದಿಂದ ಕೂಡಿರುತ್ತದೆ ಎಂದರು.
ಕರ್ನಾಟಕದಲ್ಲಿ ಲೋಕಸಮರ LIVE:ಇದುವರೆಗೆ ಶಿವಮೊಗ್ಗದಲ್ಲೇ ಅತೀ ಹೆಚ್ಚು ಮತದಾನ
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರಾಭಿಮಾನದ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಬಾರಿ ನಮ್ಮ ಅಭ್ಯರ್ಥಿ ರಾಘಣ್ಣ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್-ಜೆಡಿಎಸ್ ನವರು ಜಾತಿ ಆಧಾರದ ಮೇಲೆ ಚುನಾವಣೆ ನಡೆಸಲು ಪ್ರಯತ್ನಿಸಿದರೂ ಸಹ ಮತದಾರರು ಇದಕ್ಕೆ ಆಸ್ಪದ ಕೊಡದೇ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.