ಶಿವಮೊಗ್ಗ: ಮಹಿಳೆಯರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಸಿಲ್ಕ್ಸ್ ಸೀರೆ
ಶಿವಮೊಗ್ಗ, ಜುಲೈ 26 : ಶಿವಮೊಗ್ಗದಲ್ಲಿ 5 ದಿನಗಳ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿದೆ. ಸರ್ಕಾರಿ ನೌಕರರು ಸುಲಭ ಕಂತಿನಲ್ಲಿ ರೇಷ್ಮೆ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ನಗರದ ಕನ್ನಡ ಸಂಘದ ಸಭಾಂಗಣದಲ್ಲಿ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಚಾಲನೆ ನೀಡಿದರು. "110ವರ್ಷಗಳ ಭವ್ಯ ಇತಿಹಾಸ ಹೊಂದಿರುವ ರಾಜ್ಯ ಸರ್ಕಾರದ ಹೆಮ್ಮೆಯ ಸಂಸ್ಥೆ ಮೈಸೂರು ಸಿಲ್ಕ್ಸ್ ಉತ್ಪಾದಿಸುತ್ತಿರುವ ಗುಣಮಟ್ಟದ ಮೈಸೂರು ರೇಷ್ಮೆ ಉತ್ಪನ್ನಗಳು ನಾಡಿನ ಶ್ರೇಷ್ಟತೆ ಹಾಗೂ ಪರಂಪರೆಯ ಪ್ರತೀಕ" ಎಂದು ಹೇಳಿದರು.
"ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಮಹತ್ವದ ಸ್ಥಾನ ಪಡೆದಿರುವ ಮೈಸೂರು ರೇಷ್ಮೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಮೈಸೂರು ಉತ್ಪನ್ನಗಳಿಗೆ ಕೇಂದ್ರ ಸರ್ಕಾರವು ಜಿಯೋ ಟ್ಯಾಗ್ನ್ನು ಅಳವಡಿಸಲು ಅನುಮತಿ ನೀಡಿದೆ. ಈ ಉತ್ಪನ್ನಗಳ ಖರೀದಿಯಿಂದ ಗ್ರಾಹಕರು ಸಂತುಷ್ಟರಾಗಿದ್ದಾರೆ" ಎಂದರು.

"ರಾಮನಗರ, ಕೊಳ್ಳೆಗಾಲದಲ್ಲಿ ಬೆಳೆಯುವ ಗುಣಮಟ್ಟದ ಕಚ್ಚಾ ರೇಷ್ಮೆಯನ್ನು ನೇರವಾಗಿ ರೈತರಿಂದ ಹೆಚ್ಚಿನ ದರದಲ್ಲಿ ಸಂಸ್ಥೆಯೇ ಖರೀದಿಸಿ, ಕೌಶಲ್ಯ ಹೊಂದಿರುವ ಶ್ರಮಿಕರಿಂದ ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸಿ, ಗ್ರಾಹಕರಿಗೆ ಒದಗಿಸುತ್ತಿರುವ ಏಕೈಕ ಸಂಸ್ಥೆಯಾಗಿದೆ" ಎಂದು ಬಣ್ಣಿಸಿದರು.
ಸೀರೆಗಳ ದರ ಎಷ್ಟು : ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ರೂ. 6,100 ರಿಂದ 1.25ಲಕ್ಷ ರೂ.ಗಳ ವರೆಗಿನ ಮೌಲ್ಯದ ವಿವಿಧ ವಿನ್ಯಾಸದ ಸೀರೆಗಳು ಇವೆ. ಸರ್ಕಾರಿ ನೌಕರರು ಸುಲಭ ಕಂತಿನಲ್ಲಿ ರೇಷ್ಮೆ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಮೈಸೂರು ಸಿಲ್ಕ್ ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಭಾನುಪ್ರಸಾದ್ ಮಾತನಾಡಿ, " 50 ವರ್ಷಗಳ ಹಿಂದೆ ಮೈಸೂರು ಸಿಲ್ಕ್ ಸೀರೆಗಳನ್ನು ಖರೀದಿ ಮಾಡಿದ ಗ್ರಾಹಕರಿಂದ ಸೀರೆಗಳನ್ನು ಪಡೆದು ವಿಧಾನಸೌಧದ ಮುಂಭಾಗದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗುವುದು. ನಂತರ ಮಾಲೀಕರಿಗೆ ರೂ.20,000 ನಗದು ಪುರಸ್ಕಾರದೊಂದಿಗೆ ಅವುಗಳನ್ನು ಗ್ರಾಹಕರಿಗೆ ಹಿಂದಿರುಗಿಸಲಾಗುವುದು" ಎಂದರು.
"ಕಳೆದ ವರ್ಷ ಮೈಸೂರು ಸಿಲ್ಕ್ ಸಂಸ್ಥೆಯು 199 ಕೋಟಿ ರೂ.ಗಳ ಆರ್ಥಿಕ ವಹಿವಾಟನ್ನು ನಡೆಸಿ, ದಾಖಲೆ ನಿರ್ಮಿಸಿದೆ. ಪ್ರಸ್ತುತ ಸಾಲಿನಲ್ಲಿ ಬಿಡುಗಡೆಗೊಳಿಸಿರುವ ಹೊಸ ವಿನ್ಯಾಸದ ಸೀರೆಯು ಗ್ರಾಹಕರ ಅಭಿರುಚಿ ಹಾಗೂ ಅಭಿಪ್ರಾಯವನ್ನು ಆಧರಿಸಿ ತಯಾರಿಸಲಾಗಿದ್ದು, ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆ ಹೊಂದಿದೆ" ಎಂದು ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications