ಶಿವಮೊಗ್ಗ; ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ
ಶಿವಮೊಗ್ಗ, ಫೆಬ್ರವರಿ 22: ತೀರ್ಥಹಳ್ಳಿಯ ಪ್ರಮುಖ ಆಕರ್ಷಣೆಗಳಲ್ಲಿ ಜಯಚಾಮರಾಜೇಂದ್ರ ಸೇತುವೆಯೂ ಒಂದು. ತುಂಗಾ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ಪಟ್ಟಣದಲ್ಲಿ ಹೊಸ ಸೇತುವೆ ನಿರ್ಮಾಣವಾಗುತ್ತಿದೆ.
ಹೌದು, ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗಾಗಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 55.62 ಕೋಟಿ ರೂ.ಗಳಿಗೆ ಅನುಮೋದನೆ ಸಿಕ್ಕಿದೆ.
ಅಪಾಯದಲ್ಲಿದೆ ಜಯಚಾಮರಾಜೇಂದ್ರ ಒಡೆಯರ್ ತೂಗುಸೇತುವೆ
ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ಕುರಿತು ಫೇಸ್ ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ. ಹೊಸ ಸೇತುವೆ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.
ಶಿವಮೊಗ್ಗ; ತುಂಗಾ ನದಿಗೆ ಮತ್ತೊಂದು ಸೇತುವೆ, 20 ಕೋಟಿ ವೆಚ್ಚ
ಹೊಸ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ತುಕ್ಕು ಹಿಡಿಯುತ್ತಿದೆ ನಟ್- ಬೋಲ್ಟ್; ನಿರ್ವಹಣೆ ಇಲ್ಲದೇ ಸೊರಗಿದೆ ಶಿವಪುರ ತೂಗು ಸೇತುವೆ
ರಾಷ್ಟ್ರೀಯ ಹೆದ್ದಾರಿ 13 ತೀರ್ಥಹಳ್ಳಿ ಮತ್ತು ಶೃಂಗೇರಿಗೆ ಸಂಪರ್ಕ ಕಲ್ಪಿಸುತ್ತದೆ. ಸರಕು ಸಾಗಣೆ ಲಾರಿಗಳ ಸಂಚಾರದಿಂದಾಗಿ ನೂರು ವರ್ಷಕ್ಕೂ ಹಳೆಯದಾದ ಸೇತುವೆಗೆ ಅಪಾಯ ಎದುರಾಗಿದೆ. 2018ರಿಂದಲೇ ಹೊಸ ಸೇತುವೆ ನಿರ್ಮಾಣದ ಚರ್ಚೆಗಳು ನಡೆಯುತ್ತಿದ್ದವು.