ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 22: ತೀರ್ಥಹಳ್ಳಿಯ ಪ್ರಮುಖ ಆಕರ್ಷಣೆಗಳಲ್ಲಿ ಜಯಚಾಮರಾಜೇಂದ್ರ ಸೇತುವೆಯೂ ಒಂದು. ತುಂಗಾ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ಪಟ್ಟಣದಲ್ಲಿ ಹೊಸ ಸೇತುವೆ ನಿರ್ಮಾಣವಾಗುತ್ತಿದೆ.

ಹೌದು, ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗಾಗಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 55.62 ಕೋಟಿ ರೂ.ಗಳಿಗೆ ಅನುಮೋದನೆ ಸಿಕ್ಕಿದೆ.

ಅಪಾಯದಲ್ಲಿದೆ ಜಯಚಾಮರಾಜೇಂದ್ರ ಒಡೆಯರ್ ತೂಗುಸೇತುವೆಅಪಾಯದಲ್ಲಿದೆ ಜಯಚಾಮರಾಜೇಂದ್ರ ಒಡೆಯರ್ ತೂಗುಸೇತುವೆ

ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ಕುರಿತು ಫೇಸ್ ಬುಕ್‌ನಲ್ಲಿ ಮಾಹಿತಿ ನೀಡಿದ್ದಾರೆ. ಹೊಸ ಸೇತುವೆ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಶಿವಮೊಗ್ಗ; ತುಂಗಾ ನದಿಗೆ ಮತ್ತೊಂದು ಸೇತುವೆ, 20 ಕೋಟಿ ವೆಚ್ಚ ಶಿವಮೊಗ್ಗ; ತುಂಗಾ ನದಿಗೆ ಮತ್ತೊಂದು ಸೇತುವೆ, 20 ಕೋಟಿ ವೆಚ್ಚ

New Bridge Will Come Up In Thirthahalli Tunga River

ಹೊಸ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 ತುಕ್ಕು ಹಿಡಿಯುತ್ತಿದೆ ನಟ್- ಬೋಲ್ಟ್; ನಿರ್ವಹಣೆ ಇಲ್ಲದೇ ಸೊರಗಿದೆ ಶಿವಪುರ ತೂಗು ಸೇತುವೆ ತುಕ್ಕು ಹಿಡಿಯುತ್ತಿದೆ ನಟ್- ಬೋಲ್ಟ್; ನಿರ್ವಹಣೆ ಇಲ್ಲದೇ ಸೊರಗಿದೆ ಶಿವಪುರ ತೂಗು ಸೇತುವೆ

ರಾಷ್ಟ್ರೀಯ ಹೆದ್ದಾರಿ 13 ತೀರ್ಥಹಳ್ಳಿ ಮತ್ತು ಶೃಂಗೇರಿಗೆ ಸಂಪರ್ಕ ಕಲ್ಪಿಸುತ್ತದೆ. ಸರಕು ಸಾಗಣೆ ಲಾರಿಗಳ ಸಂಚಾರದಿಂದಾಗಿ ನೂರು ವರ್ಷಕ್ಕೂ ಹಳೆಯದಾದ ಸೇತುವೆಗೆ ಅಪಾಯ ಎದುರಾಗಿದೆ. 2018ರಿಂದಲೇ ಹೊಸ ಸೇತುವೆ ನಿರ್ಮಾಣದ ಚರ್ಚೆಗಳು ನಡೆಯುತ್ತಿದ್ದವು.

English summary
New bridge will come up in Thirthahalli Tunga river. National highway department approved for the new bridge project at the cost of 55.62 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X