ಕಾಳಿಂಗ ಸರ್ಪಗಳ ನೆಲೆವೀಡಾದ ಆಗುಂಬೆ, ಅರಣ್ಯ ಪ್ರವೇಶಕ್ಕೆ ನಿಷೇಧ
ಆಗುಂಬೆ ಅರಣ್ಯ ಪ್ರವೇಶಕ್ಕೆ ನಿಷೇಧ ಹೇರಲಾದ ಬಗ್ಗೆ ಅಧಿಕೃತ ಅಧಿಸೂಚನೆ ಹೊರ ಬಿದ್ದಿಲ್ಲದಿದ್ದರೂ, ಅಧಿಕಾರಿಗಳು ಅರಣ್ಯದೊಳಗೆ ಪ್ರವೇಶಿಸಲು ಪ್ರವಾಸಿಗರಿಗೆ ಅವಕಾಶ ನೀಡುತ್ತಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಉಡುಪಿ, ಏಪ್ರಿಲ್ 24: ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಕರೆಯಲ್ಪಡುವ, ಮಳೆಗಾಲದಲ್ಲಿ ಹೆಚ್ಚೆಚ್ಚು ಪ್ರವಾಸಿಗರನ್ನು ಅದರಲ್ಲೂ ಮುಖ್ಯವಾಗಿ ಚಾರಣ ಪ್ರೇಮಿಗಳು ಕೈಬೀಸಿ ಕರೆಯುವ ಆಗುಂಬೆ ಅರಣ್ಯ ಪ್ರದೇಶ ಪ್ರವೇಶಿಸಲು ಅಘೋಷಿತ ನಿಷೇಧ ಹೇರಲಾಗಿದೆ. ಇದಕ್ಕೆ ಕಾರಣ ಆಗುಂಬೆ ಅರಣ್ಯ ಪ್ರದೇಶ ಕಾಳಿಂಗ ಸರ್ಪಗಳ ನೆಲೆವೀಡಾಗಿರುವುದು ಹಾಗೂ ಕಾಡ್ಗಿಚ್ಚಿನ ಭಯ.
ಇಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾದ ಬಗ್ಗೆ ಅಧಿಕೃತ ಅಧಿಸೂಚನೆ ಹೊರ ಬಿದ್ದಿಲ್ಲದಿದ್ದರೂ, ಅಧಿಕಾರಿಗಳು ಅರಣ್ಯದೊಳಗೆ ಪ್ರವೇಶಿಸಲು ಪ್ರವಾಸಿಗರಿಗೆ ಅವಕಾಶ ನೀಡುತ್ತಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.[ಸಾಗರದಲ್ಲಿ ಭೀಕರ ಅಪಘಾತ: ಐವರ ದುರ್ಮರಣ]

ಆಗುಂಬೆಯಲ್ಲಿ ಎರಡು ಪ್ರವಾಸಿ ತಾಣಗಳಿವೆ. ಒಂದು ಬರ್ಕಾನ ಜಲಪಾತ ಮತ್ತೊಂದು ಜೋಗಿಗುಂಡಿ ಜಲಪಾತ. ಇಲ್ಲಿಗೆ ಬಹಳಷ್ಟು ಪ್ರವಾಸಿಗರು ಆಗಮಿಸುತ್ತಾರೆ. 2015ರಲ್ಲಿ ಮಣಿಪಾಲದ ವಿದ್ಯಾರ್ಥಿಯೊಬ್ಬ ಜೋಗಿಗುಂಡಿಗೆ ಬಿದ್ದು ಮೃತಪಟ್ಟಿದ್ದ. ಬಳಿಕ ಜೋಗಿಗುಂಡಿ ಸಾರ್ವಜನಿಕರಿಗೆ ಮುಕ್ತವಾಗಿಲ್ಲ.
ಇದಾದ ಸ್ವಲ್ಪ ಸಮಯದಲ್ಲಿ ಬರ್ಕಾನ ಜಲಪಾತದತ್ತ ಹೋಗುವುದನ್ನೂ ನಿರ್ಬಂಧಿಸಲಾಗಿದೆ ಎಂದು ಆಗುಂಬೆ ಅರಣ್ಯ ವಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.[ವೀಡಿಯೋ ವೈರಲ್, ಬಾಟಲಿಯಿಂದ ನೀರು ಕುಡಿಯುತ್ತಿರುವ ಕಾಳಿಂಗ ಸರ್ಪ]

ಈ ಬಗ್ಗೆ ಅರಣ್ಯಾಧಿಕಾರಿ ಹೇಳುವುದು ಹೀಗೆ. "ಇಲ್ಲಿನ ಅರಣ್ಯ ಪ್ರದೇಶಗಳಲ್ಲಿ ಪ್ರಯಾಣ ಬೆಳೆಸುವುದು ಯಾವತ್ತೂ ಅಪಾಯಕಾರಿಯೇನಲ್ಲ. ನೀವು ತೊಂದರೆ ಮಾಡದಿದ್ದರೆ ನಿಮಗೆ ಹಾವುಗಳು ಕಚ್ಚುವುದಿಲ್ಲ. ಈ ಕಾರಣಕ್ಕಾಗಿ ನಿಷೇಧ ಹೇರಬೇಕಾಗಿಲ್ಲ. ಆದರೆ ಅರಣ್ಯ ಪ್ರದೇಶದಲ್ಲಿ ಜನರು ತಿರುಗಾಡುತ್ತಿದ್ದರೆ ಅಗ್ನಿ ದುರಂತಗಳು ನಡೆಯುವ ಸಂಭವವಿದೆ. ಹಾಗಾಗಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ," ಎಂದವರು ಉತ್ತರಿಸಿದ್ದಾರೆ.
ಹೀಗೆ ಅಪೂರ್ವ ಚಾರಣದ ಅನುಭವ ನೀಡುತ್ತಿದ್ದ ಆಗುಂಬೆಯ ಬಾಗಿಲು ಪ್ರವಾಸಿಗರ ಪಾಲಿಗೆ ಮುಚ್ಚಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications