ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರಕ್ಕೆ ಒಲಿಯದ ಸಚಿವ ಸ್ಥಾನ!
ಶಿವಮೊಗ್ಗ, ಡಿಸೆಂಬರ್ 24: ರಾಜ್ಯ ರಾಜಕಾರಣದಲ್ಲಿ ಹಿಂದಿನಿಂದಲೂ ಶಿವಮೊಗ್ಗ ಜಿಲ್ಲೆ ಶಕ್ತಿಕೇಂದ್ರವಾಗಿದೆ. ಈ ಜಿಲ್ಲೆಯಿಂದ ನಾಲ್ವರು ಮುಖ್ಯಮಂತ್ರಿಯಾಗಿದ್ದಾರೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಶಿವಮೊಗ್ಗ ಜಿಲ್ಲೆಯಿಂದ ಕನಿಷ್ಟ ಒಬ್ಬರಾದರೂ ಸಚಿವರಾಗುತ್ತಾರೆ. ಆದರೆ ಈ ಬಾರಿ ಮಾತ್ರ ಸಮ್ಮಿಶ್ರ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಯಾವೊಬ್ಬ ಸಚಿವರೂ ಇಲ್ಲದಂತಾಗಿದೆ.
ಭದ್ರಾವತಿಯ ಶಾಸಕ ಬಿ.ಕೆ.ಸಂಗಮೇಶ್ ಗೆ ಸಚಿವರಾಗುವ ಅವಕಾಶವಿದ್ದರೂ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ. ಈ ಮೂಲಕ ಸಚಿವ ಸ್ಥಾನವೇ ಸಿಗದ ಕ್ಷೇತ್ರವಾಗಿದೆ ಭದ್ರಾವತಿ. ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದವರು ಇದುವರೆಗೆ ಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಸ್ವಾತಂತ್ರ ಬಂದು ಇಷ್ಟು ವರ್ಷಗಳಾದರೂ ಭದ್ರಾವತಿ ಕ್ಷೇತ್ರಕ್ಕೆ ಮಾತ್ರ ಇನ್ನೂ ಮಂತ್ರಿಸ್ಥಾನ ಸಿಕ್ಕಿಲ್ಲ. ಪ್ರಸ್ತುತ ಭದ್ರಾವತಿ ಶಾಸಕರಾಗಿರುವ ಬಿ.ಕೆ.ಸಂಗಮೇಶ್ ಮೂರು ಬಾರಿ ಶಾಸಕರಾಗಿದ್ದಾರೆ. ಆದರೆ ಇವರಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಸರ್ಕಾರ ರಚನೆ ವೇಳೆ ಹಾಗೂ ಸಚಿವ ಸಂಪುಟ ವಿಸ್ತರಣೆ ವೇಳೆ ಸಂಗಮೇಶ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಹೇಳಲಾಗುತ್ತಿರುತ್ತದೆ.
ಆದರೆ ಕೊನೆ ಕ್ಷಣದಲ್ಲಿ ಮಂತ್ರಿ ಸ್ಥಾನ ಕೈತಪ್ಪಿ ಹೋಗಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಾದರೂ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಂಗಮೇಶ್ ಗೆ ಮತ್ತೆ ನಿರಾಸೆಯಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಕೆ.ಸಂಗಮೇಶ್ ಗೆ ಭೂ ಸೇನಾ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಸುಮ್ಮನಿರಿಸಲಾಗಿದೆ.

ಮುಂದಿನ ದಿನದಲ್ಲಾದರೂ ಹಿರಿಯ ಶಾಸಕರಾದ ಬಿ.ಕೆ.ಸಂಗಮೇಶ್ ಗೆ ಸಚಿವ ಸ್ಥಾನ ನೀಡುವ ಮೂಲಕ ಸಚಿವ ಸ್ಥಾನದ ಭಾಗ್ಯ ಸಿಗದ ಕ್ಷೇತ್ರ ಎಂಬ ಪಾತ್ರಕ್ಕೆ ಒಳಗಾಗಿರುವ ಭದ್ರಾವತಿಗೆ ನ್ಯಾಯ ಸಿಗುತ್ತದೆಯೇ ಎಂದು ಕಾದುನೋಡಬೇಕಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications