ಸುರಕ್ಷಿತವಾಗಿ ದಡ ಸೇರಿಸುತ್ತಿದ್ದ ಲಾಂಚ್ ಸಿಬ್ಬಂದಿ ಬದುಕು ನಡು ನೀರಿಗೆ; ಕಾರಣವೇನು?
ಶಿವಮೊಗ್ಗ, ಸೆಪ್ಟೆಂಬರ್ 4: ಶರಾವತಿ ಹಿನ್ನೀರು ಭಾಗದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರನ್ನು ಸುರಕ್ಷಿತವಾಗಿ ದಡ ತಲುಪಿಸುವ ಲಾಂಚ್ ಸಿಬ್ಬಂದಿ ಬದುಕು ನಡು ನೀರಿಗೆ ಬಂದು ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನಗತಿಯಿಂದಾಗಿ ಲಾಂಚ್ ಸಿಬ್ಬಂದಿ ಒಂಬತ್ತು ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದಾರೆ. ಇದಿಷ್ಟೆ ಅಲ್ಲ, ಭವಿಷ್ಯದ ಕುರಿತು ಆತಂಕ ಎದುರಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಿಗಂಧೂರು ಶ್ರೀಚೌಡೇಶ್ವರಿ ದೇವಸ್ಥಾನಕ್ಕೆ ಬರುವ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುವುದು ಶರಾವತಿ ಹಿನ್ನೀರಿನ ಲಾಂಚ್ಗಳು. ಅಂಬಾರಗೋಡ್ಲು- ಕಳಸವಳ್ಳಿ ಮಧ್ಯೆ ಲಾಂಚ್ನಲ್ಲಿ ಪ್ರಯಾಣಿಸುವುದೆ ಹಿತವಾದ ಅನುಭವ. ಪ್ರವಾಸಿಗರು ಮತ್ತು ಸ್ಥಳೀಯರು ನಿರಂತರವಾಗಿ, ಸುರಕ್ಷಿತವಾಗಿ ದಡಕ್ಕೆ ತಲುಪಿಸುವ ಸಿಬ್ಬಂದಿಗಳು ಈ ವರ್ಷದ ಸಂಬಳವನ್ನೇ ಕಂಡಿಲ್ಲ.

2021ರಲ್ಲಿ ಸಂಬಳವನ್ನೇ ಕಂಡಿಲ್ಲ
ಶರಾವತಿ ಹಿನ್ನೀರು ಭಾಗದ ಅಂಬಾರಗೋಡ್ಲು - ಕಳಸವಳ್ಳಿ, ಹಸಿರುಮಕ್ಕಿ, ಮುಪ್ಪಾನೆ ಭಾಗದಲ್ಲಿ ಲಾಂಚ್ಗಳು ಕಾರ್ಯನಿರ್ವಹಿಸುತ್ತಿವೆ. 19 ಸಿಬ್ಬಂದಿಗಳು ಲಾಂಚ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಗುತ್ತಿಗೆ ಆಧಾರದ ನೌಕರರು. ಪ್ರತಿದಿನ ಸೇವೆ ಒದಗಿಸುವುದು ಅನಿವಾರ್ಯ. ಕೆಲವು ಸಂದರ್ಭ ಹೆಚ್ಚುವರಿ ಅವಧಿ ಕರ್ತವ್ಯ ನಿರ್ವಹಿಸಬೇಕು. ಹೀಗಿದ್ದೂ, ಈ ಸಿಬ್ಬಂದಿಗಳು 2021ರಲ್ಲಿ ಒಂದೇ ಒಂದು ತಿಂಗಳು ಸಂಬಳ ಪಡೆದಿಲ್ಲ ಎಂದರೆ ನೀವು ನಂಬಲೇಬೇಕು.

ಸಂಬಳ ಕೊಡದಿರಲು ಕಾರಣವೇನು?
ಲಾಂಚ್ ಸಿಬ್ಬಂದಿಗಳು ಕಡವುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಗುತ್ತಿಗೆ ನೌಕರರಾಗಿದ್ದಾರೆ. 2021ರ ಜನವರಿ ತಿಂಗಳಿಂದ ಇವರ ವೇತನಕ್ಕೆ ಇಲಾಖೆಯು ಹಣ ಬಿಡುಗಡೆ ಮಾಡಿಲ್ಲ. GST ಗೊಂದಲದಿಂದಾಗಿ ಹಣ ಬಿಡುಗಡೆಯಾಗಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈಗ ಹೊಸ ಬಿಲ್ ಸಿದ್ಧಪಡಿಸಲಾಗಿದ್ದು, ಇನ್ನೊಂದು ವಾರದಲ್ಲಿ ವೇತನ ಬಿಡುಗಡೆ ಆಗಬಹುದು ಎಂದು ಸಮಜಾಯಿಷಿ ನೀಡುತ್ತಿದ್ದಾರೆ.

ಇನ್ನೊಂದು ವಾರದಲ್ಲಿ ಬರುತ್ತೆ
19 ಸಿಬ್ಬಂದಿಯ ಒಟ್ಟು ವೇತನ 2 ಲಕ್ಷಕ್ಕಿಂತಲೂ ಕಡಿಮೆ ಇದೆ. ಹಾಗಾಗಿ 2 ಲಕ್ಷಕ್ಕಿಂತಲೂ ಕಡಿಮೆ ವೇತನವಿದ್ದರೆ ಜಿಎಸ್ಟಿ ಪರಿಗಣಿಸುವ ಅಗತ್ಯವಿಲ್ಲ ಎಂದು ಭಾವಿಸಿದ ಅಧಿಕಾರಿಗಳು ಬಿಲ್ ಮಾಡಿದ್ದಾರೆ. ಆದರೆ ಖಜಾನೆ ಇಲಾಖೆ ಅಧಿಕಾರಿಗಳು 2 ಲಕ್ಷಕ್ಕಿಂತಲೂ ಕಡಿಮೆ ವೇತನವಿದ್ದರೂ ಜಿಎಸ್ಟಿ ಕಡಿತ ಅಗತ್ಯ ಎಂಬ ನಿಯಮ ಸೂಚಿಸಿದ್ದಾರೆ. ಇದರಿಂದಾಗಿ ಒಂಬತ್ತು ತಿಂಗಳ ವೇತನ ಲಾಂಚ್ ಸಿಬ್ಬಂದಿ ಕೈ ಸೇರದಂತಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಡವು ಇಲಾಖೆ ಸಹಾಯಕ ನಿರೀಕ್ಷಕ ದಾಮೋದರ ನಾಯ್ಕ, "ಎರಡು ಲಕ್ಷಕ್ಕಿಂತಲೂ ಕಡಿಮೆ ವೇತನಕ್ಕೂ ಜಿಎಸ್ಟಿ ಕಡಿತಗೊಳಿಸಬೇಕು ಎಂದು ಖಜಾನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪತ್ರ ವ್ಯವಹಾರ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ಲಾಂಚ್ ಸಿಬ್ಬಂದಿಯ ವೇತನ ಪಾವತಿಯಾಗಲಿದೆ,'' ಎಂದು ತಿಳಿಸಿದ್ದಾರೆ.

ವಸತಿ ಸೌಲಭ್ಯ ಮರೀಚಿಕೆಯ ಭೀತಿ
ಲಾಂಚ್ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಚಿಂತನೆಯಾಗಿತ್ತು. ಜನಪ್ರತಿನಿಧಿಗಳು ಕೂಡ ಈ ಕುರಿತು ಪ್ರಯತ್ನ ಮಾಡಿದ್ದರು. ಆದರೆ ಈಗ ಅದೂ ಮರೀಚಿಕೆಯಾಗುವ ಸಾಧ್ಯತೆ ಇದೆ. ಅಂಬಾರಗೋಡ್ಲು ಮತ್ತು ಕಳಸವಳ್ಳಿ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತಿದೆ. ಹಾಗಾಗಿ ಲಾಂಚ್ ಸಿಬ್ಬಂದಿಗೆ ವಸತಿ ಸೌಲಭ್ಯ ಕೊಡುವ ಅಗತ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಯೋಚಿಸುತ್ತಿದ್ದಾರೆ.
ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣವಾದರೆ ಲಾಂಚ್ ಸೇವೆ ಹಂತ ಹಂತವಾಗಿ ಸ್ಥಗಿತವಾಗಬಹುದು ಅಥವಾ ಲಾಂಚ್ಗಳ ಸಂಖ್ಯೆ ಕಡಿತಗೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಲಾಂಚ್ ಸಿಬ್ಬಂದಿ ಆತಂಕದಿಂದಲೇ ದಿನ ದೂಡುವಂತಾಗಿದೆ. ಈ ಮಧ್ಯೆ ವೇತನವು ಸರಿಯಾಗಿ ಕೈಸೇರದೆ ಜೀವನ ನಡೆಸುವುದಕ್ಕೆ ಕಷ್ಟಪಡುವಂತಾಗಿದೆ. ಪ್ರತಿದಿನ ಸಾವಿರಾರು ಜನರನ್ನು ಸುರಕ್ಷಿತವಾಗಿ ದಡ ಸೇರಿಸುತ್ತಿರುವ ಲಾಂಚ್ ಸಿಬ್ಬಂದಿಯ ಜೀವನವನ್ನು ಸರ್ಕಾರ ದಡಕ್ಕೆ ಸೇರಿಸುವ ಅಗತ್ಯವಿದೆ.Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications