ತೀರ್ಥಹಳ್ಳಿ ಸಹಜ ಸ್ಥಿತಿಗೆ, ಸಿಐಡಿ ತನಿಖೆ ಆರಂಭ
ಶಿವಮೊಗ್ಗ, ನ.5 : 8ನೇ ತರಗತಿ ವಿದ್ಯಾರ್ಥಿನಿ ನಂದಿತಾ ಅಪಹರಣ ಮತ್ತು ಕೊಲೆ ಪ್ರಕರಣದ ನಂತರ ಉದ್ವಿಗ್ನಗೊಂಡಿದ್ದ ತೀರ್ಥಹಳ್ಳಿ ಸಹಜ ಸ್ಥತಿಗೆ ಮರಳುತ್ತಿದೆ. ನ.10ರವರೆಗೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಪೂರ್ವ ವಲಯ ಐಜಿಪಿ ಡಾ.ಜಿ.ಪರಶಿವಮೂರ್ತಿ ಅವರು ಬಾಲಕಿ ಮನೆಗೆ ಭೇಟಿ ನೀಡಲಿದ್ದಾರೆ.
ಬುಧವಾರ ತೀರ್ಥಹಳ್ಳಿಯಲ್ಲಿ ಅಂಗಡಿ, ಹೋಟೆಲ್ಗಳು ತೆರೆದಿದ್ದು, ಬಸ್ ಮತ್ತು ಆಟೋಗಳ ಸಂಚಾರ ಎಂದಿನಂತೆ ಆರಂಭಗೊಂಡಿದೆ. ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಮತ್ತು ಸ್ಥಳೀಯ ಬಿಜೆಪಿ ನಾಯಕರು ಬಾಲಕಿ ನಂದಿತಾ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ಬಾಲಕಿ ಮನೆಗೆ ಭೇಟಿದ್ದರು. ಪ್ರಕರಣದ ತನಿಖೆಗೆ ಎಲ್ಲರೂ ಸಹಕಾರ ನೀಡಬೇಕು, ಬಾಲಕಿ ಸಾವಿನಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಅವರು ಕರೆ ನೀಡಿದ್ದಾರೆ. [ಸರ್ಕಾರಕ್ಕೆ ಆಯನೂರು ಕೇಳಿರುವ ಪ್ರಶ್ನೆಗಳು]
ಇಂದು ಬಂದ್ : ನಂದಿತಾ ಸಾವು ಖಂಡಿಸಿ ಇಂದು ಸಾಗರ ಬಂದ್ಗೆ ಕರೆ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನ.10ರ ತನಕ ಪಟ್ಟಣದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. [ನಂದಿತಾ ಸಾವು : ಯಾರು, ಏನು ಹೇಳಿದರು]
ಸೋಮವಾರ ಬಂದ್ ವೇಳೆ ನಡೆದ ಕಲ್ಲು ತೂರಾಟ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 40 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಂದಿತಾ ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಹಿರಂಗಗೊಂಡಿಲ್ಲ. ತೀರ್ಥಹಳ್ಳಿ ಮತ್ತು ಮಣಿಪಾಲ್ನಲ್ಲಿ ನಂದಿತಾಳಿಗೆ ಚಿಕಿತ್ಸೆ ನೀಡಿದ ವರದಿ ಮಾಧ್ಯಮಗಳಲ್ಲಿ ಬಹಿರಂಗಗೊಂಡಿದ್ದು ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ.
ಸರ್ಕಾರ ಪ್ರಕರಣದ ತನಿಖೆಯನ್ನು ಮಂಗಳವಾರ ಸಿಐಡಿಗೆ ವಹಿಸಿದ್ದು, ಸಿಐಡಿ ಅಧಿಕಾರಿಗಳು ಸಂಜೆ ತೀರ್ಥಹಳ್ಳಿಗೆ ತೆರಳಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಸಿಐಡಿ ಐಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಹಲವು ಸಿಬ್ಬಂದಿ ತೀರ್ಥಹಳ್ಳಿಗೆ ತೆರಳಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications