ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ಯೋಗದ ಹುಸಿ ಭರವಸೆ; ಶೂ ಪಾಲಿಶ್, ಹಣ್ಣು ಮಾರಿ ಪ್ರತಿಭಟನೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 20: ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಎನ್ ಎಸ್ ಯುಐ ಕಾರ್ಯಕರ್ತರು ಬಸ್ ನಿಲ್ದಾಣದ ವೃತ್ತದಲ್ಲಿ ಶೂ ಚಪ್ಪಲಿ ಪಾಲಿಶ್ ಮಾಡಿ, ಹಣ್ಣು ಮಾರಾಟ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದರು.

ನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿ

ಬಿಜೆಪಿ ಸರ್ಕಾರ ಮೊದಲ ಅವಧಿಯಲ್ಲಿ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ 1 ಲಕ್ಷ ನಿರುದ್ಯೋಗಿಗಳಿಗೂ ಉದ್ಯೋಗವನ್ನು ನೀಡಲಾಗಿಲ್ಲ ಎಂದು ಆರೋಪಿಸಿದರು. ಇಂದು ಶಿವಮೊಗ್ಗದ ಅಶೋಕ ವೃತ್ತದಲ್ಲಿ ಎನ್ ಎಸ್ ಯುಐ ಕಾರ್ಯಕರ್ತರು ಶೂ ಪಾಲಿಶ್ ಮಾಡುತ್ತಾ, ಚಪ್ಪಲಿ ಮಾರಾಟ, ಹಣ್ಣು, ಟೀ ಮಾರುವ ಮೂಲಕ ಗಮನ ಸೆಳೆಯುವಂತೆ ಪ್ರತಿಭಟನೆ ನಡೆಸಿದರು.

NSUI Activists Protested Against Government For Demanding Employment

ಅಂಬಾನಿ, ಅದಾನಿಗಳಿಗೆ ಮಾತ್ರ ಈ ದೇಶದಲ್ಲಿ ಒಳ್ಳೆಯ ದಿನಗಳು ಬರುತ್ತಿವೆ. ಆದರೆ ಸಾಮಾನ್ಯ ನಾಗರಿಕರು ಉದ್ಯೋಗ ಇಲ್ಲದೆ ಪರಿತಪಿಸುವಂತಾಗಿದೆ. ಪದವೀಧರರು ಕೆಲಸಕ್ಕಾಗಿ ಅಲೆದಾಡುವುದು ತಪ್ಪಿಲ್ಲ. ಎಲ್ಲೆಲ್ಲೂ ಉದ್ಯೋಗ ಕಡಿತದ ಮಾತು ಕೇಳಿಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
NSUI activists staged a protest at the bus stop by selling shoes and fruits against the central government for neglecting job creation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X