ದಯಾಮರಣ ಕೋರಿ ಅರ್ಜಿ ಸಲ್ಲಿಸಿದ ಸಾಗರದ ದಂಪತಿ: ಅಧಿಕಾರಿಗಳ ಸ್ಪಷ್ಟನೆ
ಶಿವಮೊಗ್ಗ, ನವೆಂಬರ್ 16: ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ದಂಪತಿಗಳು ದಯಾ ಮರಣ ಕೋರಿ ಅರ್ಜಿ ಸಲ್ಲಿಸಿರುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಎನ್.ಡಿ. ಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.
ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಗ್ವೆ ಗ್ರಾಮದ ಸರ್ವೆ ನಂಬರ್ 136/1 ರಲ್ಲಿ ತಮಗೆ ಸೇರಿದ ಭೂಪರಿವರ್ತನೆಯಾದ ಜಾಗದಲ್ಲಿ 61%ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡದೆ ಇರುವುದರಿಂದ ಶ್ರೀಕಾಂತ ನಾಯ್ಕ್ ಹಾಗೂ ಸುಜಾತಾ ನಾಯ್ಕ್ ಅವರು ದಯಾಮರಣ ಕೋರಿ ಸಾಗರ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಖಂಡಿಕಾ ಗ್ರಾಮ ಪಂಚಾಯಿತಿಯಿಂದ ಸಂಬಂಧಿಸಿದ ಕಡತ ಹಾಗೂ ದಾಖಲೆಗಳನ್ನು ಪಡೆದು ಕೂಲಂಕುಷವಾಗಿ ಪರಿಶೀಲಿಸಲಾಗಿರುತ್ತದೆ ಎಂದರು.
ಇನ್ನು ಈ ಬಗ್ಗೆ ಜಿಲ್ಲಾ ಪಂಚಾಯಿತಿಯಿಂದ ಕಾನೂನು ಸಲಹೆ ಪಡೆಯಲಾಗಿದ್ದು, ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳ ಅಂತಿಮ ಆದೇಶದವರೆಗೆ ಅಥವಾ ನಿವೇಶನಗಳ ಹಂಚಿಕೆ ಕರಾರು ಪತ್ರ ಸಲ್ಲಿಸುವವರೆಗೆ ನಿವೇಶನ ಮಾರಾಟಕ್ಕೆ ಬಿಡುಗಡೆ ಮಾಡಲು ಸಾಧ್ಯವಿರುವುದಿಲ್ಲವೆಂದು ವಕೀಲರು ಕಾನೂನು ಸಲಹೆಯನ್ನು ನೀಡಿರುತ್ತಾರೆ.

ಶ್ರೀಕಾಂತನಾಯ್ಕ ಹಾಗೂ ಮ್ಯಾನೇಜಿಂಗ್ ಪಾರ್ಟ್ನರ್ ಎಸ್.ಚಂದ್ರಶೇಖರ್ ನಡುವೆ ವಿವಿಧ ನ್ಯಾಯಾಲಯಗಳಲ್ಲಿ ವಿವಿಧ ವ್ಯಾಜ್ಯಗಳು ಬಾಕಿ ಇದೆ. ಈ ಹಂತದಲ್ಲಿ ನಿವೇಶನಗಳನ್ನು ಮಾರಾಟಕ್ಕೆ ಬಿಡುಗಡೆ ಮಾಡಲು ಸಾಧ್ಯವಾಗಿರುವುದಿಲ್ಲ ಎಂದು ಎನ್.ಡಿ. ಪ್ರಕಾಶ್ ತಿಳಿಸಿದ್ದಾರೆ.
ವಾಸ್ತವಾಂಶಗಳನ್ನು ಮರೆಮಾಚಿ ಮಾಲೀಕರಾದ ಶ್ರೀಕಾಂತ ನಾಯ್ಕ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್, ಸಾಗರ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಮೇಲೆ ಅನಗತ್ಯ ಒತ್ತಡ ಹೇರುವ ಸಲುವಾಗಿ ಸುಳ್ಳು ಲಂಚದ ಆರೋಪ ಮಾಡಿರುತ್ತಾರೆ. ಇದು ಸತ್ಯಕ್ಕೆ ದೂರವಾಗಿರುತ್ತದೆ. ಆದ್ದರಿಂದ ಈ ಸುದ್ದಿ ಸತ್ಯಕ್ಕೆ ದೂರವಾಗಿರುತ್ತದೆ ಎಂದು ಅವರು ಸ್ಪಷ್ಟೀಕರಣ ನೀಡಿರುತ್ತಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications