ಆಡಿದ ಮಾತು ಹಿಂದಕ್ಕೆ ಪಡೆಯುವುದಿಲ್ಲ, 100 ಬಾರಿ ಜೈಲಿಗೆ ಹೋಗಲು ಸಿದ್ದ: ಈಶ್ವರಪ್ಪ
ಶಿವಮೊಗ್ಗ, ಆ 11: "ಆಗಸ್ಟ್ ಐದರಂದು, ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭೂಮಿಪೂಜೆ ಮಾಡಿದ ದಿನ, ಸಮಸ್ತ ಹಿಂದೂಗಳು ಸಂತಸ ಪಡುವ ದಿನವಾಗಿತ್ತು" ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
"ಅಂದು ನಾನು ಮಥುರಾ ಮತ್ತು ಕಾಶಿ ವಿಚಾರದ ಬಗ್ಗೆ ಹೇಳಿಕೆಯನ್ನು ನೀಡಿದ್ದೆ. ಅದು ನನ್ನ ಮನಸ್ಸಿನ ಭಾವನೆಯಾಗಿತ್ತು. ಅದಕ್ಕೆ ನನಗೆ ವಿಷಾದವಿಲ್ಲ" ಎಂದು ಈಶ್ವರಪ್ಪ ಹೇಳಿದರು.
"ಮಧುರಾ ಮತ್ತು ಕಾಶಿ, ಹಿಂದೂಗಳ ಪವಿತ್ರ ಸ್ಥಳ. ಅಲ್ಲಿ ಮಂದಿರ ನಿರ್ಮಿಸುವ ಸಂಬಂಧ ನನ್ನನ್ನು ಬಂಧಿಸುವುದಾದರೆ, ನೂರು ಬಾರಿ ಜೈಲಿಗೆ ಹೋಗಲು ಸಿದ್ದ. ಆ ವಿಚಾರದಲ್ಲಿ ನಾನು ಆಡಿದ ಮಾತನ್ನು ಹಿಂದಕ್ಕೆ ಪಡೆಯುವುದಿಲ್ಲ"ಎಂದು ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

"ಅನೇಕ ಹಿಂದೂಗಳ ಪ್ರತಿನಿಧಿಯಾಗಿ ನನ್ನ ಭಾವನೆಯನ್ನು ವ್ಯಕ್ತಪಡಿಸಿದ್ದೆ. ಡಿ.ಕೆ.ಶಿವಕುಮಾರ್ ಅವರು ನನ್ನ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಈಶ್ವರಪ್ಪ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಆಗ್ರಹಿಸಿದ್ದರು. ಇದು ಅವರು ಮಾಡುತ್ತಿರುವ ರಾಜಕೀಯ ಅಲ್ಲವೇ"ಎಂದು ಈಶ್ವರಪ್ಪ ಪ್ರಶ್ನಿಸಿದರು.
"ಮಥುರಾ ಕ್ಷೇತ್ರ ಕೃಷ್ಣನ ಜನ್ಮಸ್ಥಾನ, ಕಾಶಿ, ವಿಶ್ವನಾಥ ನೆಲೆಸಿರುವ ಪುಣ್ಯಕ್ಷೇತ್ರ. ಅಂತಹ ದೇಗುಲಗಳನ್ನು ಕೆಡವಿ, ಅಲ್ಲಿ ಮಸೀದಿ ನಿರ್ಮಿಸಲಾಗಿದೆ. ಹಿಂದೂಗಳ ಭಾವನೆಗೆ ಮುಸ್ಲಿಮರು ಬೆಲೆ ಕೊಡಬೇಕು. ಹಾಗಾಗಿ, ಅಲ್ಲಿ, ಮಸೀದಿಗಳನ್ನು ಮುಕ್ತಗೊಳಿಸಬೇಕು"ಎಂದು ಈಶ್ವರಪ್ಪ ಹೇಳಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications