ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯ ಹಿಂದುತ್ವ Vs ಜೆಡಿಎಸ್ ಹಿಂದುತ್ವ: ಓವರ್ ಟು ಕುಮಾರಣ್ಣ

|
Google Oneindia Kannada News

Recommended Video

ಬಿಜೆಪಿ ಹಿಂದುತ್ವಕ್ಕೂ ಜೆಡಿಎಸ್ ಹಿಂದುತ್ವಕ್ಕೂ ವ್ಯತ್ಯಾಸ ತಿಳಿಸಿದ ಎಚ್ ಡಿ ಕೆ | Oneindia Kannada

ಭಾರತೀಯ ಜನತಾ ಪಕ್ಷದ ಹಿಂದುತ್ವ ಮತ್ತು ಜಾತ್ಯಾತೀತ ಜನತಾದಳದ ಹಿಂದುತ್ವದ ನಡುವಿನ ವ್ಯತ್ಯಾಸವೇನು ಎನ್ನುವುದನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವರಿಸಿದ್ದಾರೆ. ಅವರದ್ದು ಢೋಂಗಿ ನಮ್ಮದೇ ಸರಿಯಾದ ಹಿಂದುತ್ವ ಎನ್ನುವುದಕ್ಕೆ ತಮ್ಮದೇ ರೀತಿಯಲ್ಲಿ ಎಚ್ಡಿಕೆ ವ್ಯಾಖ್ಯಾನ ನೀಡಿದ್ದಾರೆ.

ಶಿವಮೊಗ್ಗದ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾಗಿದೆ, ಇನ್ನೇನಿದ್ದರೂ ಮತದಾರರನ್ನು ಓಲೈಸಿಕೊಳ್ಳುವ ಕೆಲಸ. ಇವರು ಅವರನ್ನು ಟೀಕಿಸುವುದು, ಅವರು ಇವರನ್ನು ಜರಿಯುವುದು, ಅದೇ ದಾರಿಯಲ್ಲಿ ಚುನಾವಣಾ ಪ್ರಚಾರ ಸಾಗುತ್ತಿದೆ.

ಶಿವಮೊಗ್ಗ ಉಪಚುನಾವಣೆ: ಜೆಡಿಎಸ್ ಮುಂದೆ ಮಂಡಿಯೂರಿದ ಕಾಂಗ್ರೆಸ್ ಶಿವಮೊಗ್ಗ ಉಪಚುನಾವಣೆ: ಜೆಡಿಎಸ್ ಮುಂದೆ ಮಂಡಿಯೂರಿದ ಕಾಂಗ್ರೆಸ್

ಅಯೋಧ್ಯ, ರಾಮಮಂದಿರ ಎಂದು ಹೇಳಿಕೊಂಡು ಬಿಜೆಪಿಯವರು ಅಧಿಕಾರಕ್ಕೆ ಬಂದಿರುವುದು. ಅಧಿಕಾರಕ್ಕಾಗಿ ದೇವರನ್ನು ಎಳೆದು ತಂದವರು ಬಿಜೆಪಿಯವರು, ಅದು ಅವರ ಹಿಂದುತ್ವ, ನಮ್ಮ ಹಿಂದುತ್ವ ಅದಲ್ಲ ಎಂದು ಕುಮಾರಸ್ವಾಮಿ, ಬಿಜೆಪಿಯನ್ನು ಜಾಲಾಡಿಸಿದ್ದಾರೆ.

ಮೈಸೂರು ದಸರಾ - ವಿಶೇಷ ಪುರವಣಿ

ಶಿವಮೊಗ್ಗ ಜಿಲ್ಲೆಯ ಹಿರಿಯ ಮತ್ತು ಅನುಭವಿ ಕಾಂಗ್ರೆಸ್ ಮುಖಂಡರ ಸೂಚನೆಯಂತೆ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು, ಇದೊಂದು ಕಾಟಾಚಾರದ ಚುನಾವಣೆ ಎಂದು ಯಾರೂ ಅಂದುಕೊಳ್ಳಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ, ಮೈತ್ರಿ ಪಕ್ಷಗಳಿಗೆ ಹುಲಿ 'ಶಿಕಾರಿ' ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ, ಮೈತ್ರಿ ಪಕ್ಷಗಳಿಗೆ ಹುಲಿ 'ಶಿಕಾರಿ'

ಜೆಡಿಎಸ್ ಮತ್ತು ಕಾಂಗ್ರೆಸ್ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ ಚುನಾವಣೆ ಎದುರಿಸಲಿದೆ, ಅಧಿಕಾರಕ್ಕೆ ಬಂದ ಅಲ್ಪ ಅವಧಿಯಲ್ಲಿ ಸಮ್ಮಿಶ್ರ ಸರಕಾರದ ಸಾಧನೆಯೇ ನಮಗೆ ಶ್ರೀರಕ್ಷೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಣ್ಣನ ಪ್ರಕಾರ, ಬಿಜೆಪಿಯ ಹಿಂದುತ್ವ ಮತ್ತು ಜೆಡಿಎಸ್ ಹಿಂದುತ್ವಕ್ಕೆ ಇರುವ ವ್ಯತ್ಯಾಸವೇನು?

ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಾರೆ

ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಾರೆ

ಶಿವಮೊಗ್ಗ ಉಪಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆದ್ದಿರಬಹುದು, ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ, ಎರಡೂ ಪಕ್ಷದ ಕಾರ್ಯಕರ್ತರ ಬಲದಿಂದ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ - ಕುಮಾರಸ್ವಾಮಿ.

ಬಿಜೆಪಿಗಿಂತ ದೊಡ್ಡ ಹಿಂದುತ್ವ ನಮ್ಮಲ್ಲೂ ಇದೆ

ಬಿಜೆಪಿಗಿಂತ ದೊಡ್ಡ ಹಿಂದುತ್ವ ನಮ್ಮಲ್ಲೂ ಇದೆ

ಬಿಜೆಪಿಗಿಂತ ದೊಡ್ಡ ಹಿಂದುತ್ವ ನಮ್ಮಲ್ಲೂ ಇದೆ, ಬಿಜೆಪಿ ಇಷ್ಟುದಿನ ಉಳಿದುಕೊಂಡಿರುವುದೇ ಹಿಂದುತ್ವದ ಹೆಸರು ಹೇಳಿಕೊಂಡು. ಬರೀ, ಹಿಂದೂ, ರಾಮಮಂದಿರದ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಶಿವಮೊಗ್ಗದ ಉಪಚುನಾವಣಾ ಫಲಿತಾಂಶ ತೋರಿಸಿಕೊಡುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಹೇಳಿದ್ದೇನು?ಶಿವಮೊಗ್ಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಹೇಳಿದ್ದೇನು?

ನಾವು ಹೇಗೆ ಬಿಜೆಪಿಗಿಂತ ಭಿನ್ನ

ನಾವು ಹೇಗೆ ಬಿಜೆಪಿಗಿಂತ ಭಿನ್ನ

ನಮ್ಮ ಹಿಂದುತ್ವ ಬಿಜೆಪಿಗಿಂತ ಭಿನ್ನವಾಗಿದೆ. ನಾವು ಎಲ್ಲಾ ಜಾತಿ, ಧರ್ಮದವರನ್ನು ಒಟ್ಟಿಗೆ ತೆಗೆದುಕೊಂಡು ಸಮಾಜದಲ್ಲಿ ಬದುಕುತ್ತೇವೆ, ಒಡೆದು ಆಳುವ ಸಂಪ್ರದಾಯ ನಮ್ಮಲ್ಲಿಲ್ಲ. ವಿಷಬೀಜ ಬಿತ್ತುವ ಕೆಲಸವನ್ನು ನಾವು ಮಾಡುವುದಿಲ್ಲ ಎಂದು ಕುಮಾರಸ್ವಾಮಿ, ಹಿಂದುತ್ವದ ಬಗ್ಗೆ ಜೆಡಿಎಸ್ ಪಕ್ಷದ ನಿಲುವನ್ನು ವಿವರಿಸಿದ್ದಾರೆ.

ಕಾಟಾಚಾರಕ್ಕೆ ಈ ಚುನಾವಣೆಯನ್ನು ಎದುರಿಸುತ್ತಿಲ್ಲ

ಕಾಟಾಚಾರಕ್ಕೆ ಈ ಚುನಾವಣೆಯನ್ನು ಎದುರಿಸುತ್ತಿಲ್ಲ

ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರದಲ್ಲಿ ಸ್ವಲ್ಪ ಗೊಂದಲವಿದ್ದದ್ದು ನಿಜ, ಕಾಗೋಡು ತಿಮ್ಮಪ್ಪ ಮುಂತಾದ ಹಿರಿಯ ಮುಖಂಡರ ಸೂಚನೆಯಂತೆ, ಮಧು ಬಂಗಾರಪ್ಪನವರನ್ನು ಕಣಕ್ಕಿಳಿಸಿದ್ದೇವೆ. ಸುಮ್ಮನೆ ನಾವೇನೂ ಕಾಟಾಚಾರಕ್ಕೆ ಈ ಚುನಾವಣೆಯನ್ನು ಎದುರಿಸುತ್ತಿಲ್ಲ ಎಂದು ಕುಮಾರಸ್ವಾಮಿ, ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಉಪ ಚುನಾವಣೆಯೇ ಸೆಮಿಫೈನಲ್: ಎಚ್ಡಿಕೆಲೋಕಸಭಾ ಚುನಾವಣೆಗೆ ಉಪ ಚುನಾವಣೆಯೇ ಸೆಮಿಫೈನಲ್: ಎಚ್ಡಿಕೆ

ರೈತರ ಸಾಲಮನ್ನಾ ಮಾಡಿದ್ದೇವೆ. ಹಿಂದುತ್ವ ನಮ್ಮಲ್ಲೂ ಇದೆ

ರೈತರ ಸಾಲಮನ್ನಾ ಮಾಡಿದ್ದೇವೆ. ಹಿಂದುತ್ವ ನಮ್ಮಲ್ಲೂ ಇದೆ

ನಾಲ್ಕು ತಿಂಗಳ ಅವಧಿಯಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದೇವೆ, ರೈತರ ಸಾಲಮನ್ನಾ ಮಾಡಿದ್ದೇವೆ. ಹಿಂದುತ್ವ ನಮ್ಮಲ್ಲೂ ಇದೆ, ಆದರೆ ನಾವು ಅಭಿವೃದ್ದಿಯ ವಿಚಾರವನ್ನು ಮುಂದಿಟ್ಟುಕೊಂಡು ಉಪಚುನಾವಣೆಯನ್ನು ಎದುರಿಸುತ್ತೇವೆ. ನಮ್ಮ ಹಿಂದುತ್ವಕ್ಕೂ, ಬಿಜೆಪಿಯ ಹಿಂದುತ್ವಕ್ಕೂ ಬಹಳ ವ್ಯತ್ಯಾಸವಿದೆ - ಕುಮಾರಸ್ವಾಮಿ.

English summary
Our Hindutva is different than BJP's Hindutva, Karnataka CM Kumaraswamy explained what is parties stand in election campaign in Shivamogga parliament bypoll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X