ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ನಿಧನ
ಶಿವಮೊಗ್ಗ, ಡಿಸೆಂಬರ್, 21: ಗಮಕ ಗಂಧರ್ವ, ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿಯ ಎಚ್.ಆರ್.ಕೇಶವಮೂರ್ತಿ (89) ಅವರು ಇಂದು ನಿಧನರಾಗಿದ್ದಾರೆ.
2022ರಲ್ಲಿ ಕೇಂದ್ರ ಸರ್ಕಾರ ಎಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿ ಗೌರವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು.
ಅಡಿಕೆ ಆಮದು ವಿರುದ್ಧದ ಪ್ರತಿಭಟನೆ ಬಲವಂತದಿಂದ ಅಂತ್ಯ: ಎಎಪಿ ಕಿಡಿ
ಎಚ್.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಳ್ಳಿಯ ರಾಮಸ್ವಾಮಿ ಶಾಸ್ತ್ರಿ-ಲಕ್ಷ್ಮೀದೇವಮ್ಮ ದಂಪತಿ ಪುತ್ರರಾಗಿದ್ದಾರೆ. ಫೆಬ್ರವರಿ 22, 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆಯನ್ನು ಕರಗತ ಮಾಡಿಕೊಂಡಿದ್ದರು. 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನವನ್ನು ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನೂ ರೂಢಿಸಿಕೊಂಡರು.

ದೇಶದ ಹಲವೆಡೆ ಗಮಕ ವಾಚನ
ರಾಜ್ಯ, ದೇಶದ ಹಲವೆಡೆ ಕಾರ್ಯಕ್ರಮಗಳಲ್ಲಿ ಗಮಕ ವಾಚನ ಮಾಡಿದ್ದಾರೆ. 100ಕ್ಕೂ ಹೆಚ್ಚು ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದರು. ಇವರ ಅದ್ಭುತ ಕಲೆಗೆ ಹಲವು ಪ್ರಶಸ್ತಿಗಳು ಅರಸಿ ಬಂದಿವೆ.
ಎಚ್.ಆರ್.ಕೇಶವಮೂರ್ತಿ ಮತ್ತು ಡಾ. ಮತ್ತೂರು ಕೃಷ್ಣಮೂರ್ತಿ ಅವರ ಜೋಡಿ ಪ್ರಖ್ಯಾತಿ ಪಡೆದಿತ್ತು. ಉದಯ ಟಿವಿಯಲ್ಲಿ ಇವರು ನಡೆಸುತ್ತಿದ್ದ ಕುಮಾರವ್ಯಾಸ ಭಾರತ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿತ್ತು. ಡಾ.ಮತ್ತೂರು ಕೃಷ್ಣಮೂರ್ತಿ ಅವರು ಸಂಸ್ಕೃತ ಗ್ರಾಮ ಮತ್ತೂರಿನವರಾಗಿದ್ದಾರೆ. ಎಚ್.ಆರ್.ಕೇಶವಮೂರ್ತಿ ಅವರು ಹೊಸಹಳ್ಳಿಯವರಾಗಿದ್ದಾರೆ. ಮತ್ತೂರು, ಹೊಸಹಳ್ಳಿ ಇವೆರಡು ಕೂಡ ಅವಳಿ ಗ್ರಾಮಗಳಾಗಿವೆ.

ಕೇಶವಮೂರ್ತಿಯವರ ಹಲವು ಸಾಧನೆ
ಕುಮಾರವ್ಯಾಸ ಭಾರತ, ಜೈಮಿನಿ ಭಾರತ, ಪಂಪನ ಮಹಾ ಭಾರತ, ರನ್ನನ ಗಧಾಯುದ್ಧ, ರಘುವಂಶ, ಕುಮಾರಸಂಭವದ ಶ್ಲೋಕಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಅಲ್ಲದೇ ಆರು ದಶಕಗಳ ಕಾಲ ಗಮಕವನ್ನು ದೇಶದೆಲ್ಲೆಡೆ ಪಸರಿಸಿದ್ದಾರೆ. ಕುಮಾರವ್ಯಾಸ ಭಾರತದ 135 ಧ್ವನಿ ಸುರುಳಿಗಳು, ಮಾರ್ಕಂಡೇಯ ಅವಧಾನಿ ಅವರ ವ್ಯಾಖ್ಯಾನದೊಂದಿಗೆ 35 ಧ್ವನಿ ಸುರುಳಿಗಳಲ್ಲಿ ಜೈಮಿನಿ ಭಾರತ ಹೊರ ಬಂದಿದೆ. ಕುಮಾರವ್ಯಾಸ ಭಾರತದ 200 ಕ್ಯಾಸೆಟ್ಗಳನ್ನು ಕೂಡ ಹೊರ ತಂದಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications