ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನತೆಗೆ ನನ್ನ ಗೆಲುವು ಬೇಕಾಗಿದೆ ಎಂದ ಮಧು ಬಂಗಾರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

Recommended Video

ಮತ ಚಲಾಯಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ: Lok Sabha Elections 2019 | Oneindia kannada

ಶಿವಮೊಗ್ಗ, ಏಪ್ರಿಲ್ 23:ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿರುವ ನನ್ನ ಗೆಲುವು ಶತ ಸಿದ್ಧ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕುಬಟೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸಂಸದರು ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ ಎಂಬುದು ಜನತೆಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬದಲಾವಣೆ ಬಯಸಿದ್ದಾರೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಕ್ಷೇತ್ರದ ಅಭಿವೃದ್ಧಿಗೆ ಮಧು ಗೆಲುವು ಜನತೆಗೆ ಬೇಕಾಗಿದೆ ಎಂದರು.

 ಮಧ್ಯಾಹ್ನ ಮೂರು ಗಂಟೆ ವೇಳೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಮಧ್ಯಾಹ್ನ ಮೂರು ಗಂಟೆ ವೇಳೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

People of Shivamogga constituency want to change

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಉತ್ತಮ ಮತದಾನವಾಗಿದ್ದು, ಈ ಬಾರಿ ಶೇ.80ಕ್ಕೂ ಹೆಚ್ಚಿನ ಮತದಾನವಾಗುವ ನಿರೀಕ್ಷೆ ಇದೆ. ಬಿಸಿಲಿನ ಬೇಗೆಯನ್ನೂ ಮತದಾರ ಲೆಕ್ಕಿಸದೆ ಮತ ಚಲಾಯಿಸುತ್ತಿದ್ದು, ಆಚಾಪುರ, ಸಾಲೂರು, ಶಿಕಾರಿಪುರದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಬಿಸಿಲನ್ನೂ ಲೆಕ್ಕಿಸದೆ ಮತಗಟ್ಟೆಗೆ ಧಾವಿಸಿ ಮತ ಚಲಾಯಿಸಿದ್ದಾರೆ.

English summary
Shivamogga Alliance candidate Madhu Bangarappa cast thier vote at Kubaturu with family.In this time he said that people of this constituency want to change.So my win is certain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X